ಬಿಸಿ ಬಿಸಿ ಸುದ್ದಿ

ಪರಿಶಿಷ್ಟ ಜಾತಿ ಪಟ್ಟಿಯಿಂದ ಸ್ಪರ್ಶ್ಯ ಜಾತಿಗಳನ್ನು ತೆಗೆಯುವಂತೆ ಹೋರಾಟ ಅಗತ್ಯ: ತೇಗಲತಿಪ್ಪಿ

ಶಹಾಬಾದ: ಸ್ಪರ್ಶ್ಯ ಜಾತಿಗಳಾದ ಲಂಬಾಣಿ,ಭೋವಿ ವಡ್ಡರ್, ಕೊರಚ, ಕೊರಮ ಜಾತಿಗಳನ್ನು ಪರಿಶಿಷ್ಟ ಜಾತಿಯಿಂದ ತೆಗೆಯುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡುವ ಅಗತ್ಯ ಎಂದಿಗಿಂತಲೂ ಇಂದು ಅವಶ್ಯವಾಗಿದೆ ಎಂದು ಅಸ್ಪೃಶ್ಯ ಸಮುದಾಯಗಳ ಮಹಾಸಭಾದ ಅಧ್ಯಕ್ಷ ಭೀಮರಾವ ತೇಗಲತಿಪ್ಪಿ ಹೇಳಿದರು.

ಅವರು ಶನಿವಾರ ನಗರದ ಪಾರ್ವತಿ ಸಭಾಂಗಣದಲ್ಲಿ ಆಯೋಜಿಸಲಾದ ಪರಿಶಿಷ್ಟ ಜಾತಿ ಸಮುದಾಯಗಳ ಸಮಾರಂಭದಲ್ಲಿ ಮಾತನಾಡಿದರು.

ಅಸ್ಪೃಶ್ಯ ಜಾತಿಗಳಾದ ಪರಿಶಿಷ್ಟ ಜಾತಿ(ಹೊಲೆಯ) ಮತ್ತು ಮಾದಿಗರಿಗೆ ಮಾತ್ರ ಮೀಸಲಾತಿಯನ್ನು ನೀಡಬೇಕೆಂದು ಸರ್ವೋಚ್ಛ ನ್ಯಾಯಾಲಯ ಕರ್ನಾಟಕ ಸರ್ಕಾರಕ್ಕೆ   ಆದೇಶ ನೀಡಿದೆ.ಆದರೆ ಸರ್ಕಾರ ಮಾತ್ರ ನಿರ್ಲಕ್ಷ್ಯ ಧೋರಣೆ ತೋರುತ್ತಿದೆ. ಪರಿಶಿಷ್ಟ ಜಾತಿಗಳಾದ ಹೊಲೆಯ,ಮಾದಿಗ, ಸಮಗಾರ, ಡೋಹರ ಸಮಾಜದ ಬಂಧುಗಳಿಗೆ ಸಿಗಬೇಕಾದ ಮೀಸಲಾತಿಯ ಸವಲತ್ತುಗಳು ಸಿಗಬೇಕಾದರೆ ನಾವೆಲ್ಲರೂ ಒಂದಗೂಡಿ ಹೋರಾಟ ಮಾಡುವ ಅಗತ್ಯತೆಯಿದೆ ಎಂದು ಹೇಳಿದರು.

ಹಣಮಂತ ಭೋಧನಕರ್ ಮಾತನಾಡಿ, ರಾಜ್ಯ ಸರ್ಕಾರ ಕೂಡಲೇ ಸ್ಪಶ್ರ್ಯ ಜಾತಿಗಳನ್ನು ಪರಿಶಿಷ್ಟ ಜಾತಿಯಿಂದ ಕೈಬಿಟ್ಟು, ಪರಿಶಿಷ್ಟ ಜಾತಿಗಳಿಗೆ ನ್ಯಾಯ ಒದಗಿಸಬೇಕಿದೆ.ಅಲ್ಲದೇ ಸರ್ವೋಚ್ಛ ನ್ಯಾಲಯದ ಆದೇಶವನ್ನು ಎತ್ತಿ ಹಿಡಿಯಬೇಕೆಂದು ಆಗ್ರಹಿಸಿದರು.

ಪರಮೇಶ್ವರ ಖಾನಾಪುರೆ,ಶ್ಯಾಮ ನಾಟೇಕಾರ,ಮಲ್ಲೇಶಿ ಸಜ್ಜನ್, ದಶರಥ ಓಣಿ,ಸುರೇಶ ಮೆಂಗನ್,ರಾಜೇಶ ಹೊನಗುಂಟಿಕರ್, ಗಿರೀಶ ಕಂಬಾನೂರ,ಶಿವರಾಜ ಕೋರೆ,ನಾಗರಾಜ ಸಿಂಘೆ,ಶರಣಬಸಪ್ಪ ಪಗಲಾಪೂರ,ದೇವೆಂದ್ರ ಗಾಯಕವಾಡ,ಬಸವರಾಜ ಮಯೂರ,ಪ್ರವೀಣ ರಾಜನ್,ನರೇಶ ಕಟಕೆ,ಕಾಶಿರಾಯ ನಂದೂರಕರ್,ಮಲ್ಲಿಕಾರ್ಜುನ್ ಗಾಜರೆ,ಬಸಣ್ಣ ಸಿಂಗೆ,ಸುರೇಶ ಹಾದಿಮನಿ,ವಿಶಾಲ ದರ್ಗಿ,ದಿನೇಶ ದೊಡ್ಡಮನಿ ಸೇರಿದಂತೆ ಅನೇಕ ಜನರು ಇದ್ದರು.

emedia line

Recent Posts

ಬಸವರಾಜ್ ಎಸ್ ಜಿಲಿಗೆ ಸನ್ಮಾನ ನಾಳೆ

ಕಲಬುರಗಿ; ಬಸವರಾಜ್ ಎಸ್ ಜಿಲಿ ಅಭಿಮಾನಿ ಬಳಗದ ವತಿಯಿಂದ ಡೆಪ್ಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಕೆ ಎಸ್ ಆರ್…

12 mins ago

ಐಆರ್‌ಎಸ್‌ಒ ಕರ್ನಾಟಕ ರಾಜ್ಯ ಕಾರ್ಯಕರ್ತರ ಸಭೆ

ರಾಯಚೂರು; ಮಾರ್ಕ್ಸ್ ಭವನದಲ್ಲಿ ಎಐಆರ್‌ಎಸ್‌ಒ ಕರ್ನಾಟಕ ರಾಜ್ಯ ಮಟ್ಟದ ಕಾರ್ಯಕರ್ತರ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕರ್ತರ ಸಭೆಯಲ್ಲಿ, ಕೇಂದ್ರ ಸಂಘಟನಾ…

33 mins ago

ಶೈಲಜಾ ಶರಣಗೌಡಗೆ ಪಿಎಚ್. ಡಿ. ಡಾಕ್ಟರೇಟ್ ಪದವಿ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಶೋಧನಾ ವಿಭಾಗದ ವಿದ್ಯಾರ್ಥಿನಿ, ಶೈಲಜಾ ಶರಣಗೌಡ ಇವರು ಡಾ. ಶಾರದಾ ದೇವಿ ಎಸ್.…

35 mins ago

ಜನಪದ ಕಲಾವಿದರು ಸಮಾಜದ ಆಸ್ತಿ

ಕಲಬುರಗಿ; ಗ್ರಾಮೀಣ ಭಾಗದಲ್ಲಿ ಅನೇಕ ಜನ ಕಲಾವಿದರು ಹಗಲಿರುಳು ಸೇವೆಗೈದು ಜನಪದ ಉಳಿಸುವುದರೊಂದಿಗೆ ಸಮಾಜದ ಆಸ್ತಿಯಾಗಿದ್ದಾರೆ ಎಂದು ನ್ಯಾಯವಾದಿ ಹಣಮಂತರಾಯ…

40 mins ago

ಕಲಬುರಗಿ: ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

ಕಲಬುರಗಿ: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ 15ರ ಫಿರದೋಸ್ ಕಾಲೋನಿ ಬಡಾವಣೆಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಸೈಯದ್ ಮಿರಾಜೊದ್ದೀನ್ ಕಾಶೀಪ್…

3 hours ago

ಸಿಯುಕೆಯಲ್ಲಿ ರಾಷ್ಟ್ರೀಯ ಅಪ್ರೆಂಟಿಸ್‍ಶಿಪ್ ತರಬೇತಿ ಯೋಜನೆ ಕುರಿತು ಜಾಗೃತಿ

ಕಲಬುರಗಿ: "ನ್ಯಾಷನಲ್ ಅಪ್ರೆಂಟಿಸ್‍ಶಿಪ್ ಟ್ರೈನಿಂಗ್ ಸ್ಕೀಮ್ (ಓಂಖಿS) ಐಟಿಐ, ಪಿಯುಸಿ, ಡಿಪೆÇ್ಲೀಮಾ ಮತ್ತು ಪದವೀಧರರು ಸೇರಿದಂತೆ ತಾಂತ್ರಿಕ ಮತ್ತು ತಾಂತ್ರಿಕೇತರ…

4 hours ago