ಬಿಸಿ ಬಿಸಿ ಸುದ್ದಿ

ಮೊಬೈಲ್ ಆಪ್ ಮೂಲಕ ಬೆಡ್ ಗಳ ಮಾಹಿತಿ ನೀಡಿ: ಡಾ. ಅಜಗರ್ ಚುಲಬುಲ್

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಗಣನಿಯವಾಗಿ ಏರಿಕೆ ಕಾಣುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಫೋನ್ ಮೂಲಕ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡುವ ಮೂಲಕ ನಾಪತ್ತೆಯಾಗಿದ್ದಾರೆ. ಕೋವಿಡ್-19 ನಿರ್ವಹಣೆಗಾಗಿ ಬೆಂಗಳೂರು ಮಾದರಿಯಲ್ಲಿ ಮತ್ತೊಬ್ಬ ಸಚಿವರನ್ನು ನೇಮಿಸಬೇಕೆಂದು ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ. ಮಹಮ್ಮದ್ ಅಜಗರ್ ಚುಲಬುಲ್ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.

ಮಹಾಮಾರಿ ವಿರುದ್ಧ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ ಅವರು ಏಕಾಂಗಿಯಾಗಿ ಹಗಳಿರುಳು ಶ್ರಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಬೆಡ್ ಗಳ ಕೊರತೆ ಹೆಚ್ಚಾಗುತ್ತಿದೆ. ಸಣ್ಣ ಪ್ರಮಾಣದ ಲಕ್ಷಣ ಹೊಂದಿರುವ ರೋಗಿಗಳಿಗೆ ದೆಹಲಿ ಮಾದರಿಯ ರೀತಿಯಲ್ಲಿ ಮನೆಯಲ್ಲಿಯೇ ಪ್ರತ್ಯಕ ಕೊಣೆಯಲ್ಲಿ ಹೋಂ ಐಸೂಲೇಷನ್ ಮಾಡಿ, ಆಕ್ಸಿ ಮೀಟರ್ ನೀಡಿ ಉತ್ತಮ ಚಿಕಿತ್ಸೆ ನೀಡಬಹುದಾಗಿದೆ ಎಂದು ತಿಳಿಸಿದರು.

ವೈದ್ಯರ ಕೊರತೆ ನಿವಾರಿಸಲು ವೈದ್ಯಕೀಯ ಪದವಿ ಪಡೆಯುತ್ತಿರುವ ಫೈನಲ್ ಇಯರ್ ಓದುತಿರುವ ವೈದ್ಯರ, ನರ್ಸಗಳು ಅಥವಾ ಗುತ್ತಿಗೆ ಆಧಾರದ ಮೇಲೆ ವೈದ್ಯರು ಹಾಗೂ ನರ್ಸಗಳನ್ನು ನೇಮಕ ಮಾಡಿಕೊಂಡು ಸೇವೆ ಪಡೆದು ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳಬಹುದೆಂದು ತಿಳಿಸಿದ್ದಾರೆ.

ಬೆಡ್ ಗಳ ಮಾಹಿತಿ ಇಲ್ಲದೇ ರೋಗಿಗಳು ತೊಂದರೆ ಅನುಭವಿಸುತ್ತಿದ್ದು, ಮುಬೈಲ್ ಆಪ್ ಮೂಲಕ ಖಾಲಿ ಬೆಡ್ ಗಳ ಮಾಹಿತಿ ಜನರಿಗೆ ತಲುಪಿಸುವ ಕೆಲಸ ನಡೆಸಬೇಕೆಂದು ಅವರು ಮನವಿ ಮಾಡಿದ್ದಾರೆ.

sajidpress

Recent Posts

ಆದೀಶ್ವರ ಕಂಪನಿಯ ಕಾರ್ಯ ಉತ್ತಮವಾದದ್ದು: ದರ್ಶನಾಪುರ

ಶಹಾಪುರ : ಗ್ರಾಹಕರ ಬೇಡಿಕೆಗೆ ತಕ್ಕಂತೆ ಉತ್ತಮ ಗುಣಮಟ್ಟದ ಗೃಹಬಳಕೆ ವಸ್ತುಗಳನ್ನು ತಯಾರಿಸಿ ಮಾರುಕಟ್ಟೆಗೆ ಒದಗಿಸುವ ಏಕೈಕ ಅದೀಶ್ವರ ಕಂಪನಿ…

9 mins ago

ಸಚಿವಾಲಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಣೆ ನಾಳೆ

ಬೆಂಗಳೂರು: 'ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘ ಮತ್ತು ವಿಧಾನ ಪರಿಷತ್ ಸಚಿವಾಲಯ…

1 hour ago

ಹದಗೆಟ್ಟ ರಸ್ತೆಗಳು ದುರಸ್ಥಿಗೆ ಕರವೇ ಆಗ್ರಹ

ಕಲಬುರಗಿ : ನಗರದ ರಸ್ತೆಗಳು ಮಳೆಯಿಂದಾಗಿ ಹದಗೆಟ್ಟಿದ್ದು,ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಸದರಿ ರಸ್ತೆಗಳನ್ನು ದುರಸ್ತಿಗೊಳಿಸಬೇಕು…

1 hour ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ ತಾಯಿಯ ಎದೆಹಾಲು ಅಮೃತಕ್ಕೆ ಸಮ: ಪ್ರೊ. ವಿಜಯರೆಡ್ಡಿ

ಕಲಬುರಗಿ: ಹುಟ್ಟಿದ ಮಗುವು ಆರೋಗ್ಯಯುತವಾಗಿ ಬೆಳೆಯಲು ತಾಯಿಯ ಎದೆಹಾಲು ಅತ್ಯಂತ ಅವಶ್ಯಕವಾಗಿದೆ. ಇದರಿಂದ ಹುಟ್ಟಿದ ಮಗುವಿಗೆ ತಾಯಿಯ ಎದೆ ಹಾಲುಣಿಸುವುದು…

3 hours ago

ಪಾಮನಕಲ್ಲೂರಿನ ಸುಡುಗಾಡಿಗೆ ದಾರಿ ಯಾವುದಯ್ಯ!?

ರಾಯಚೂರು: ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ ಊರ ಮುಂದೆ ಇರುವ ಸ್ಮಶಾನ (ರುದ್ರಭೂಮಿ) ಸರ್ಕಾರಿ ಜಾಲಿಗಿಡಗಳು ಬೆಳೆದು…

17 hours ago

ಡಿ.ಕೆ. ಸೌಹಾರ್ದ ಸಹಕಾರಿ ನಿಯಮಿತದ ೩ನೇ ಸಾಮಾನ್ಯ ಸಭೆ ಆಗಸ್ಟ್ 15 ರಂದು

ಕಲಬುರಗಿ: ಡಿ.ಕೆ. ಸೌಹಾರ್ದ ಸಹಕಾರಿ ನಿಯಮಿತದ ೨೦೨೩-೨೪ನೇ ಸಾಲಿನ ೩ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಆಗಸ್ಟ್ ೧೫ ರಂದು ಗುರುವಾರ…

18 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420