ಬೆಂಗಳೂರು: ಹೌದು ಕರ್ನಾಟಕದ ಸಿಂಗಂ ಅಂದೇನೆ ಪ್ರಖ್ಯತಗೊಂಡಿದ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಮ್ಮ ವೃತಿ ಜೀವನಕ್ಕೆ ರಾಜೀನಾಮೆ ಸಲ್ಲಿಸುವ ಕುರಿತು ಕಳೆದ ಎರಡು ದಿನಗಳಿಂದ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಇಂದು ಸಂಜೆವರೆಗೆ ತಮ್ಮ ಅಂತಿಮ ನಿಲುವಿನ ಬಗ್ಗೆ ಸ್ಪಷ್ಟಪಡಿಸಲಿದ್ದಾರೆ.
ರಾಜ್ಯದಲ್ಲಿ ಕಳ್ಳರು, ದರೋಡೇಕೋರರು, ಕೊಲೆಗಡುಕರು ಅಣ್ಣಾಮಲೈ ಅವರ ಕಂಡರೆ ಅಕ್ಷರಶಃ ನಡುಗುತ್ತಾರೆ. ಹೀಗೆ ಅಪರಾಧಿಗಳ ಮನಸ್ಸಿನಲ್ಲಿ ಭಯದ ಬೀಜ ಬಿತ್ತಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಈಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದು, ಅವರ ಅಭಿಮಾನಿ ಹಾಗೂ ಪೊಲೀಸ್ ಇಲಾಖೆಗೆ ಶಾಕ್ ನೀಡಿದ್ದಾರೆ.
ಸಾಕಷ್ಟು ಪ್ರಕರಣಗಳನ್ನು ನೀರುಕುಡಿದಂತೆ ಬೇಧಿಸಿದ ಹೆಗ್ಗಳಿಕೆ ಅಣ್ಣಾಮಲೈ ಅವರದಾಗಿದ್ದು, ಅವರು ಹೊದ ಕಡೆಗಳಲ್ಲಿ ಅಣ್ಣಾಮಲೈ ಅವರ ಕಾರ್ಯವೈಖರಿ ಕುರಿತು ಮೆಚ್ಚುಗೆ ಕೇಳಿ ಬರುತ್ತದೆ. ಸುಮಾರು ಹತ್ತು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ ಅವರು ರಾಜೀನಾಮೆ ಮುಂದಾಗಿದ್ದು, ಅವರ ಫಾಲೋವರ್ಸ್ಗೆ ಭಾರಿ ಬೇಸರ ಮೂಡಿಸಿದೆ.
ಸದ್ಯ ಬೆಂಗಳೂರು ದಕ್ಷಿಣದ ಡಿಸಿಪಿಯಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಸಂಜೆ ವರೆಗೆ ಅಣ್ಣಾಮಲೈ ಐಪಿಎಸ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಕುರಿತು ಸ್ಪಷ್ಟವಾಗಲಿದೆ. ಅಣ್ಣಮಲೈ ಅವರು ಸದ್ಯದಲ್ಲೇ ಗೃಹ ಇಲಾಖೆಯ ಕಾರ್ಯದರ್ಶಿಗಳಿಗೆ ಭೇಟಿ ನೀಡಿ ರಾಜೀನಾಮೆ ಸಲ್ಲಿಸಲಿದ್ದಾರೆಂದು ತಿಳಿದುಬಂದಿದ್ದು, ರಾಜೀನಾಮೆ ಕುರಿತು ಪತ್ರವೊಂದನ್ನು ಬೀಡುಗಡೆಗೊಳಿಸಿ ಮಾಹಿತಿ ನೀಡಿದ್ದಾರೆ.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…