ತನ್ನ ಹೆಸರಲ್ಲಿ ಸಂಘ ಸಂಸ್ಥೆ ರಚಿಸಿದರೆ ಕಟ್ಟುನಿಟ್ಟಿನ ಕ್ರಮ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ

0
72

ಬೆಂಗಳೂರು: ನನ್ನ ಹೆಸರು ಬಳಸಿಕೊಂಡು ಯಾರೂ ಕೂಡ ಅಭಿಮಾನಿಗಳ ಸಂಘ, ಟ್ರಸ್ಟ್, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ತನ್ನ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಈಗಾಗಲೇ ಅಸ್ತಿತ್ವದಲ್ಲಿರುವ ಎಂ ಎಸ್ ಅಂಗಡಿ ನೇತೃತ್ವದ ಅಖಿಲ ಕರ್ನಾಟಕ ಡಿ.ಕೆ ಶಿವಕುಮಾರ್  ಅಭಿಮಾನಿಗಳ ಸಂಘವನ್ನು ಹೊರತುಪಡಿಸಿ ನನ್ನ ಹೆಸರಿನ ಅಭಿಮಾನಿ ಸಂಘ, ಸಂಸ್ಧೆಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಸರ್ಜಿಸಬೇಕು ಎಂದು ಸೂಚಿಸಿದ್ದಾರೆ.

Contact Your\'s Advertisement; 9902492681

ಒಂದೊಮ್ಮೆ ಯಾರಾದರೂ ನನ್ನ ಹಾಗೂ ನನ್ನ ಸಹೋದರ ಡಿ ಕೆ ಸುರೇಶ್  ಹೆಸರಿನ ಸಂಘ ಸಂಸ್ಥೆಗಳ ಮೂಲಕ ಚಟುವಟಿಕೆ ನಡೆಸಿದರೆ, ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿ.ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here