ಆಳಂದ: ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ನಾಪತ್ತೆಯಾಗಿದ್ದಾರೆ ಎಂದಿರುವ ಕಾಂಗ್ರೆಸ್ ಮುಖಂಡ ಬಿ ಆರ್ ಪಾಟೀಲ ಹೇಳಿಕೆಗೆ ಆಳಂದ ಮಂಡಲ ಬಿಜೆಪಿ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ ತಿರುಗೇಟು ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಶಾಸಕರ, ಅಧಿಕಾರಿಗಳ ಮೂಲಕ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು ಪ್ರತಿಯೊಂದು ಘಟನೆಗಳ ಮಾಹಿತಿಯನ್ನು ಪಡೆಯುತ್ತಿದ್ದಾರೆ ಅಷ್ಟೇ ಅಲ್ಲದೇ ಆಡಳಿತಾತ್ಮಕವಾಗಿ ಯಾವುದೇ ತೊಂದರೆಗಳು ಎದುರಾಗದಂತೆ ಎಚ್ಚರಿಕೆ ವಹಿಸಿದ್ದಾರೆ. ಅವರ ಬಗ್ಗೆ ಟೀಕೆ ಮಾಡುವ ಯಾವ ನೈತಿಕತೆಯೂ ಬಿ ಆರ್ ಪಾಟೀಲ ಅವರಿಗೆ ಇಲ್ಲ ಎಂದು ತಿಳಿಸಿದ್ದಾರೆ.
ಅಧಿಕಾರ ಕಳೆದುಕೊಂಡಗಾಲೆಲ್ಲ ಅಧಿಕಾರದಲ್ಲಿರುವ ಸರ್ಕಾರಕ್ಕೆ ಪತ್ರ ಬರೆಯುವ ಚಾಳಿ ಹೊಂದಿದ್ದಾರೆ. ಈಗ ಸಧ್ಯ ಉಸ್ತುವಾರಿ ಸಚಿವರ ಬಗ್ಗೆ ಅವರು ನೀಡಿರುವ ಹೇಳಿಕೆ ಕೇವಲ ಅವರ ಪಕ್ಷದ ಹೈಕಮಾಂಡ್ ಮೆಚ್ಚಿಸುವುದಕ್ಕಾಗಿದೆ ಹೊರತು ಬೇರೆ ಯಾವ ಸದುದ್ದೇಶವನ್ನು ಹೊಂದಿಲ್ಲ ಎಂದು ಟೀಕಿಸಿದ್ದಾರೆ.
ಕೊರೋನಾ ಸಂಕಷ್ಟದ ಕಾಲದಲ್ಲಿ ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡಿದಾಗ ಕಾಂಗ್ರೆಸ್ ಮುಖಂಡರು ಯಾವ ರೀತಿ ವರ್ತನೆ ತೋರಿದ್ದಾರೆ ಎನ್ನುವುದು ರಾಜ್ಯಕ್ಕೆ ಗೊತ್ತಿದೆ. ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿ ಜೊತೆ ಹೇಗೆ ವರ್ತಿಸಬೇಕು ಎನ್ನುವುದನ್ನು ಕಾಂಗ್ರೆಸ್ ಮುಖಂಡರಿಗೆ ಬಿ ಆರ್ ಪಾಟೀಲ ತಿಳಿಸಿ ಹೇಳಲಿ ಎಂದು ಒತ್ತಾಯಿಸಿದ್ದಾರೆ.
ಅಷ್ಟಕ್ಕೂ ಉಸ್ತುವಾರಿ ಸಚಿವರನ್ನು ನೇಮಿಸುವುದು ನಮ್ಮ ಪಕ್ಷದ ಆಂತರಿಕ ವಿಚಾರ ಅದರಲ್ಲಿ ಬಿ ಆರ್ ಪಾಟೀಲರು ಮೂಗು ತೋರಿಸುವ ಅವಶ್ಯಕತೆ ಇಲ್ಲ. ಕೊರೋನಾ ಆರಂಭವಾದ ದಿನದಿಂದ ಸ್ವತ: ಬಿ ಆರ್ ಪಾಟೀಲರು ತಾವು ಪ್ರತಿನಿಧಿಸುತ್ತಿದ್ದ ಆಳಂದ ಮತಕ್ಷೇತ್ರಕ್ಕೆ ಎಷ್ಟು ಸಲ ಭೇಟಿ ನೀಡಿದ್ದಾರೆ?.ಈಗ ಕೊರೋನಾ ಸ್ವಲ್ಪ ಹತೋಟಿಗೆ ಬರುತ್ತಿದ್ದಂತೆ ಮತ್ತೆ ಕ್ಷೇತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕೊರೋನಾ ಮಹಾಮಾರಿಯ ವಿರುದ್ಧ ಸರ್ಕಾರ ಮತ್ತು ಜನತೆ ಹೋರಾಟ ಮಾಡುತ್ತಿದ್ದರೇ ಕಾಂಗ್ರೆಸ್ ಮತ್ತು ಅದರ ಮುಖಂಡರು ಸುಳ್ಳು ಆರೋಪ ಮಾಡುವುದರಲ್ಲಿ ನಿರತಾಗಿದ್ದಾರೆ ಎಂದು ಟೀಕಿಸಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಕಾರ್ಯವೈಖರಿಯ ಕುರಿತು ಹೊಗಳುತ್ತಿರುವ ಬಿ ಆರ್ ಪಾಟೀಲರ ಹೇಳಿಕೆಯ ಹಿಂದೆ ರಾಜಕೀಯ ಅಡಗಿದೆ. ಮುಖ್ಯಮಂತ್ರಿಗಳನ್ನು ಹೊಗಳಿ ಬಿಜೆಪಿಗೆ ಸಮೀಪವಾಗುವ ಲಕ್ಷಣ ಅವರ ಹೇಳಿಕೆಯ ಹಿಂದಿದೆ ಎಂದು ಆಳಂದ ಮಂಡಲ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ ಪತ್ರಿಕೆಗಳಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…