ಆಳಂದನಲ್ಲಿ ತಹಶೀಲ್ದಾರರಿಂದ ರಾಷ್ಟ್ರಧ್ವಜಾರೋಹಣ

0
38

ಕಲಬುರಗಿ: ಎಪ್ಪತ್ನಾಲ್ಕನೇ ಸ್ವಾತಂತ್ರೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಆಳಂದ ಪಟ್ಟಣದ ಶ್ರೀ ರಾಮ ಮಾರ್ಕೆಟ್ ಪ್ರದೇಶದಲ್ಲಿ ಶನಿವಾರ ತಾಲೂಕಾಡಳಿತದಿಂದ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ತಹಶೀಲ್ದಾರ್ ದಯಾನಂದ ಪಾಟೀಲ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಕೋವಿಡ್-19 ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿರುವ 9 ಜನ‌ ಕೊರೋನಾ ವಾರಿಯರ್ಸ್ ಗಳಿಗೆ ಸನ್ಮಾನಿಸಲಾಯಿತು.

Contact Your\'s Advertisement; 9902492681

ಇದಲ್ಲದೆ ಬೆಳೆ‌ ಸಮೀಕ್ಷೆಗೆ ರೈತರು ಸ್ವತ: ತಮ್ಮ ಮೋಬೈಲ್ ನಿಂದ ಬೆಳೆಗಳ ಮಾಹಿತಿ ಅಪಲೋಡ್ ಮಾಡಲು ಅವಕಾಶ ಮಾಡಿಕೊಡಲಾಗಿದ್ದು, ಭಿತ್ತಿಪತ್ರಗಳನ್ನು ಶಾಸಕ ಸುಭಾಷ ಗುತ್ತೇದಾರ ಬಿಡುಗಡೆಗೊಳಿಸಿದರು.

ಶಾಸಕ ಸುಭಾಷ ಗುತ್ತೇದಾರ ಸೇರಿದಂತೆ ತಾಲೂಕು ಹಂತದ ಅಧಿಕಾರಿಗಳು ಭಾಗವಹಿಸಿದ್ದರು.

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here