ಕೇಳದ ಮಕ್ಕಳ ಕಲರವ: ಕಳೆಗುಂದಿದ ಸ್ವಾತಂತ್ರ್ಯ ಸಂಭ್ರಮ

ವಾಡಿ: ಸ್ವಾತಂತ್ರೋತ್ಸವದ ಸಂಭ್ರಮ ಹೆಚ್ಚಿಸುತ್ತಿದ್ದ ಶಾಲೆಗಳು, ಕೊರೊನಾ ಸಾಂಕ್ರಾಮಿಕ ರೋಗದ ಭೀತಿಯಿಂದ ಈ ವರ್ಷ ಬಾಗಿಲು ಮುಚ್ಚಿಕೊಂಡಿದ್ದರಿಂದ ಬೀದಿಗಳಲ್ಲಿ ಸಾಗುತ್ತಿದ್ದ ಪುಟಾಣಿ ವಿದ್ಯಾರ್ಥಿಗಳ ಆಕರ್ಷಕ ಪ್ರಭಾತ್‌ಪೇರಿಗಳು ಕಂಡು ಬರಲಿಲ್ಲ. ಪರಾರಿ ಬಂಟಿಂಗ್ಸ್ ಮತ್ತು ದೇಶಭಕ್ತಿ ಗೀತೆಗಳ ಸುಳಿವಿರಲಿಲ್ಲ. ತ್ರೀವರ್ಣ ಭಾವುಟಗಳನ್ನು ಹಿಡಿದು ತೊದಲು ನುಡಿಗಳಲ್ಲಿ ಕೇಳಿಬರುತ್ತಿದ್ದ ರಾಷ್ಟ್ರಪರ ಘೋಷಣೆಗಳು ಕೇಳಿಬರಲಿಲ್ಲ.

ಪಥಸಂಚಲನ, ಹಾಡು, ನೃತ್ಯ, ನಾಟಕಗಳು ಏರ್ಪಡಲಿಲ್ಲ. ರಾಷ್ಟ್ರಧ್ವಜಕ್ಕೆ ಕೇಸರಿ ಬಿಳಿ ಹಸಿರು ವರ್ಣದ ಭಾವುಟ ಮೇಲಕ್ಕೇರಿ ಪಟಪಟಿಸಿತ್ತೇವಿನಹ ಸ್ವಾತಂತ್ರ್ಯದ ಆ ಸಂಭ್ರಮ ಎಲ್ಲೂ ಕಣ್ಣುಕಟ್ಟಲಿಲ್ಲ. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಗುಣಗಾನಕ್ಕೂ ಭಾರಿ ಬರ ಎದ್ದುಕಾಣಿಸಿತು. ಸ್ಥಳೀಯ ರಾಜಕಾರಣಿಗಳ ನಾಲಿಗೆಯಿಂದ ಹೊರಡಿದ ರಾಷ್ಟ್ರಗೀತೆ ರಾಗ ಲಯ ತಪ್ಪಿ, ಸಿಮೆಂಟ್ ನಗರಿ ವಾಡಿ ವ್ಯಾಪ್ತಿಯಲ್ಲಿ ೭೪ನೇ ಸ್ವಾತಂತ್ರ್ಯ ಉತ್ಸವ ಕಳೆಗುಂದಿದ್ದು, ಸ್ಥಳೀಯರಲ್ಲಿ ಬೇಸರವನ್ನುಂಟುಮಾಡಿತು.

ಪುರಸಭೆ ಕಚೇರಿ: ಸುರಿಯುತ್ತಿದ್ದ ಜಿಟಿಜಿಟಿ ಮಳೆಯಲ್ಲೇ ಮುಖ್ಯಾಧಿಕಾರಿ ಶರಣಪ್ಪ ಮಡಿವಾಳ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಸಮುದಾಯ ಸಂಘಟನಾಧಿಕಾರಿ ಕಾಶೀನಾಥ ಧನ್ನಿ, ಕಿರಿಯ ಅಭಿಯಂತರರ ರಾಜಕುಮಾರ ಅಕ್ಕಿ, ಕಂದಾಯ ಅಧಿಕಾರಿ ಎಂ.ಪಂಕಜಾ, ಉಪಾಧ್ಯಕ್ಷ ಮಲ್ಲಯ್ಯ ಗುತ್ತೇದಾರ, ಪುರಸಭೆ ಸದಸ್ಯರಾದ ದೇವಿಂದ್ರ ಕರದಳ್ಳಿ, ಶರಣು ನಾಟೀಕಾರ, ತಿಮ್ಮಯ್ಯ ಪವಾರ, ಮಹ್ಮದ್ ಗೌಸ್, ಸಿಬ್ಬಂದಿಗಳಾದ ಈಶ್ವರ ಅಂಬೇಕರ, ಕೆ.ವಿರೂಪಾಕ್ಷಿ, ಮನೋಜಕುಮಾರ ಹಿರೋಳಿ, ಮುಖಂಡರಾದ ಬಶೀರ ಖುರೇಶಿ, ಮಹ್ಮದ್ ಆಶ್ರಫ್, ವಿಜಯಕುಮಾರ ಸಿಂಗೆ, ಕಿಶನ ಜಾಧವ ಪಾಲ್ಗೊಂಡಿದ್ದರು.

ಬಿಜೆಪಿ ಶಕ್ತಿಕೇಂದ್ರ: ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಬಿಜೆಪಿ ಅಧ್ಯಕ್ಷ ಬಸವರಾಜ ಪಂಚಾಳ, ಲಕ್ಷಾಂತರ ಜನ ಭಾರತೀಯರ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಪ್ರಧಾನ ಕಾರ್ಯದರ್ಶಿ ವೀರಣ್ಣ ಯಾರಿ ರಾಷ್ಟ್ರನಾಯಕರ ಭಾವಚಿತ್ರಗಳಿಗೆ ಪೂಜೆ ನೆರವೇರಿಸಿದರು. ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ನಿವೇದಿತಾ ದಹಿಹಂಡೆ, ಪುರಸಭೆ ಸದಸ್ಯ ರಾಜೇಶ ಅಗರವಾಲ, ಮುಖಂಡರಾದ ಹರಿ ಗಲಾಂಡೆ, ನಿರ್ಮಲಾ ಇಂಡಿ, ವಿಠ್ಠಲ ನಾಯಕ, ಗಿರಿಮಲ್ಲಪ್ಪ ಕಟ್ಟಿಮನಿ, ದೌಲತರಾವ ಚಿತ್ತಾಪುರಕರ, ಬಸವರಾಜ ಕೀರಣಗಿ, ವಿಜಯಕುಮಾರ ಪವಾರ, ವಿಶಾಲ ನಿಂಬರ್ಗಾ, ಬಿ.ಕೆ.ಕಾಳಪ್ಪ ಪಾಲ್ಗೊಂಡಿದ್ದರು.

ಸಂತ ಅಂಬ್ರೂಸ್ ಕಾನ್ವೆಂಟ್ ಶಾಲೆ: ಮಹಾಮಾರಿ ಕೊರೊನಾ ಸಂಕಟದಲ್ಲಿ ಮುಖ್ಯಶಿಕ್ಷಕಿ ಸಿಸ್ಟರ್ ಸೆಲೀನ್ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಸಿಸ್ಟರ್ ತೆಕಲಾಮೇರಿ, ಶಿಕ್ಷಕರಾದ ಸುಭಾಷ ಮೇಲಕೇರಿ, ಡಾನ್ ಬಾಸ್ಕೋ, ಮಮತಾ, ಸುಪ್ರೀಯಾ, ಮೇಘಾ, ಇಮ್ಯಾನುವೆಲ್, ಪ್ರಕಾಶ, ಚಾರ್ಲೇಸ್ ಪಾಲ್ಗೊಂಡಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420