ಕೊರೋನಾ ಸೋಂಕಿನಿಂದ ಕಲಬುರಗಿಯಲ್ಲಿ ಮತ್ತೆ 7 ಜನ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ಮತ್ತೆ 7 ಜನ ನಿಧನವಾಗಿರುವ ಬಗ್ಗೆ ಸೋಮವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 170ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ಕಲಬುರಗಿಯ ಸಂತೋಷ ಕಾಲೋನಿಯ 70 ವರ್ಷದ ವೃದ್ಧ (P-137425) ಆ.1 ರಂದು ಆಸ್ಪತ್ರೆಗೆ ದಾಖಲಾಗಿ ಆ.7 ರಂದು ನಿಧನರಾಗಿದ್ದಾರೆ.ಐ.ಎಲ್.ಐ. ಹಿನ್ನೆಲೆ ಜೊತೆಗೆ ಮಧುಮೇಹದಿಂದ ಬಳಲುತ್ತಿದ್ದ ಕಲಬುರಗಿ ಇ.ಎಸ್.ಐ.ಸಿ. ಆಸ್ಪತ್ರೆಯ 52 ವರ್ಷದ ಪುರುಷ (P-141858) ಜು.16 ರಂದು ಆಸ್ಪತ್ರೆಗೆ ದಾಖಲಾಗಿ ಆ.3 ರಂದು ನಿಧನ ಹೊಂದಿದ್ದಾರೆ.

ಸೋಂಕಿನ ಮೂಲ ಪತ್ತೆಯಾಗದೆ ನರರೋಗದಿಂದ ಬಳಲುತ್ತಿದ್ದ ಕಲಬುರಗಿಯ ಬ್ರಹ್ಮಪುರ ಪ್ರದೇಶದ 62 ವರ್ಷದ ವೃದ್ಧ (P-174462) ಆ.3 ರಂದು ಆಸ್ಪತ್ರೆಗೆ ದಾಖಲಾಗಿ ಆ.13 ರಂದು ನಿಧನ.ಸೋಂಕಿನ ಮೂಲ ಪತ್ತೆಯಾಗದ ಕಲಬುರಗಿಯ ಜೆ.ಆರ್.ನಗರದ 54 ವರ್ಷದ ಪುರುಷ (P-194160) ಆ.14 ರಂದು ಆಸ್ಪತ್ರೆಗೆ ದಾಖಲಾಗಿ ಅಂದೇ ನಿಧನ.

ತೀವ್ರ ಉಸಿರಾಟ ತೊಂದರೆ ಜೊತೆಗೆ ಹೃದ್ರೋಗದಿಂದ ಬಳಲುತ್ತಿದ್ದ ಕಲಬುರಗಿಯ ಜಮ್ ಜಮ್ ಕಾಲೋನಿಯ 70 ವರ್ಷದ ವೃದ್ಧ (P-200742) ಆ.12 ರಂದು ಆಸ್ಪತ್ರೆಗೆ ದಾಖಲಾಗಿ ಆ.14 ರಂದು ನಿಧನರಾಗಿದ್ದಾರೆ.ತೀವ್ರ ಉಸಿರಾಟ ತೊಂದರೆಯಿಂದ ಕಲಬುರಗಿಯ ಬಸವೇಶ್ವರ ಕಾಲೋನಿಯ 34 ವರ್ಷದ ಪುರುಷ (P-205927) ಆ.11 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ತೀವ್ರ ಉಸಿರಾಟ ತೊಂದರೆಯಿಂದ ಚಿತ್ತಾಪುರ ತಾಲೂಕಿನ ದಿಗ್ಗಾಂವ ಗ್ರಾಮದ 72 ವರ್ಷದ ವೃದ್ಧೆ (P-216633) ಆ.14 ರಂದು ಆಸ್ಪತ್ರೆಗೆ ದಾಖಲಾಗಿ ಅಂದೇ ನಿಧನರಾಗಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

9 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

12 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

17 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

17 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

19 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420