ಕೆಜಿಹಳ್ಳಿ ಡಿಜೆಹಳ್ಳಿ ಘಟನೆ ಖಂಡಿಸಿ ಸುರಪುರದಲ್ಲಿ ರಾಮ್ ಸೇನಾ ಪ್ರತಿಭಟನೆ

ಸುರಪುರ: ನಗರದ ತಹಸಿಲ್ದಾರ ಕಚೇರಿ ಆವರಣದಲ್ಲಿ ಮಂಗಳವಾರ ರಾಮಸೇನೆ ವತಿಯಿಂದ ಪ್ರತಿಭಟನೆ ನಡೆಸಿ ಬೆಂಗಳೂರಿನ ಕೆಜೆಹಳ್ಳಿ ಡಿಜೆಹಳ್ಳಿಯಲ್ಲಿ ನಡೆದ ಪೊಲೀಸರ ಮೇಲೆ ನಡೆದ ದಾಳಿಯನ್ನು ಖಂಡಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ರಾಮ್ ಸೇನಾ ತಾಲೂಕು ಅಧ್ಯಕ್ಷ ಶರಣು ನಾಯಕ ಡೊಣ್ಣಿಗೇರಾ ಮಾತನಾಡಿ, ಬೆಂಗಳೂರಿನ ಕೆಜೆಹಳ್ಳಿ ಡಿಜೆಹಳ್ಳಿಯಲ್ಲಿ ನಡೆದ ದುಸ್ಕೃತ್ಯದಲ್ಲಿ ಎಸ್ಡಿಪಿಐ ಮತ್ತು ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ಭಾಗಿಯಾಗಿದ್ದು ಸರ್ಕಾರಕ್ಕೆ ಆಧಾರ ಸಮೇತವಾಗಿ ಸಿಕ್ಕಿದೆ ಪೊಲೀಸ್ ಠಾಣೆಯ ಮೇಲೆ ದಾಳಿಮಾಡಿ ವಾಹನಗಳಿಗೆ ಬೆಂಕಿ ಹಚ್ಚಿದ್ದಲ್ಲದೆ ಪೊಲೀಸರ ಮೇಲೆ ಹಲ್ಲೆ ನಡೆಸಿರುವುದರ ಹಿಂದೆ ಇದೆ ಸಂಘಟನೆಗಳ ಕೈವಾಡ ಇರುವುದು ತಿಳಿದರು ಸಹ ಇನ್ನು ಸರ್ಕಾರ ಈ ಸಂಘಟನೆಗಳನ್ನು ನಿಸೇಧಿಸುವಲ್ಲಿ ಮೀನಾ ಮೇಷ ಎಣಿಸುತ್ತಿದ್ದಾರೆ ಈಗಲಾದರು ಎಚ್ಚೆತ್ತುಕೊಂಡು ಈ ಸಂಘಟನೆಗಳನ್ನು ನಿಸೇಧಿಸಬೇಕು ಎಂದರು.

ನಂತರ ಸಂಘಟನೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಶರಣು ನಾಯಕ ದೀವಳಗುಡ್ಡ ಮಾತನಾಡಿ, ಡಿಜಿಹಳ್ಳಿ ಮತ್ತು ಕೆಜಿಹಳ್ಳಿ ಪ್ರಕರಣಕ್ಕೆ ಕಾರಣರಾದ ಎಲ್ಲರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಾಗೂ ಬೆಳಗಾವಿಯ ಪೀರನವಾಡಿಯಲ್ಲಿ ತೆರವು ಗೊಳಿಸಲಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು ಹಾಗೂ ಧಾರವಾಡದ ಬೇಗೂರು ಗ್ರಾಮದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಆರೋಪಿಗೆ ಮರಣದಂಡನೆ ವಿಧಿಸಬೇಕು ಮತ್ತು ಶೃಂಗೇರಿಯ ಶಂಕರಾಚಾರ್ಯರ ಪುತ್ಥಳಿಯ ಮೇಲೆ ಬೇರೊಂದು ಧರ್ಮದ ಧ್ವಜ ಹಾರಿಸಿರುವ ಆರೋಪಿಗೆ ಉಗ್ರ ಶಿಕ್ಷೆಗೆ ಒಳಪಡಿಸಬೇಕೆಂದರು.

ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಗ್ರೇಡ್-೨ ತಹಸಿಲ್ದಾರ್ ಸುಫಿಯಾ ಸುಲ್ತಾನ ಅವರಿಗೆ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಸೇನೆಯ ಗೌರವಾಧ್ಯಕ್ಷ ಕುಮಾರ್ ನಾಯಕ, ಶರಣುನಾಯಕ ತಿಮ್ಮಾಪುರ, ಕಾರ್ಯದರ್ಶಿ ಹಯ್ಯಾಳಪ್ಪ ಹಾದಿಮನಿ, ಅನಿಲ್ ಬಿಳಾರ್, ಗುರುನಾಥ್ ಶೀಲವಂತ, ಮಾನು ಕಲಬುರ್ಗಿ, ಶ್ರವಣ ಕುಮಾರ, ಲೋಕೇಶ ಡೊಣ್ಣಿಗೇರಾ, ಹರೀಶ ತ್ರಿವೇದಿ, ರಾಘು ಕೃಷ್ಣಾಪುರ ಸೇರಿದಂತೆ ಇನ್ನಿತರರಿದ್ದರು.

emedialine

Recent Posts

ಇಂದಿನಿಂದ ಸೂಗೂರ (ಕೆ ) ನವರಾತ್ರಿ ಬ್ರಹ್ಮೋತ್ಸವ

ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…

1 hour ago

ಕಾಳಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…

2 hours ago

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

15 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

18 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

22 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420