ಕೊರೋನಾ ವಾರಿಯರ್ಷಗಳಿಗೆ ಪಾದಪೂಜೆ ಜಾಗೃತಿಯಿಂದ ಜೀವನ ಸಾಗಿಸಿ: ಬಡಿಗೇರ

ಕಲಬುರಗಿ: ಕೊರೋನಾ ಹಾವಳಿಯಿಂದ ದೂರ ಉಳಿಯಬೇಕಾದರೆ ಮುನ್ನೆಚ್ಚರಿಕೆ ಮತ್ತು ಜಾಗೃತಿಯಿಂದ ಜೀವನ ಸಾಗಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ ಹೇಳಿದರು.

ನಗರದ ಅಂಭುಬಾಯಿ ಅಂಧ ಬಾಲಕರ ಶಾಲೆಯಲ್ಲಿ ರುದ್ರ ಸಾಮಾಜಿಕ ಸೇವಾ ಸಂಸ್ಥೆಯ ಕಾರ್ಯಕರ್ತರು ಆಯೋಜಿಸಿದ್ದ “ಕೊರೊನಾ ವರಿಯರ್ಷಗಳಿಗೆ ಪಾದಪೂಜೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಕೊರೊನಾ ತಡೆಗಟ್ಟುವಲ್ಲಿ ಪೌರ ಕಾರ್ಮಿಕರ ಸೇವೆ ಅನನ್ಯ ಎಂದು ಹೇಳಿದ ಅವರು, ಪ್ರತಿಯೊಬ್ಬರು ಅರಿತು ಜೀವನ ನಡೆಸಿದರೆ ಯಾವ ರೋಗವು ನಮ್ಮ ಸುತ್ತ ಸುಳಿವುದಲ್ಲ ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಾಮಾಜಿಕ ಕಾರ್ಯಕತ೯ ಶರಣು ಪಪ್ಪಾ, ಸರಿಯಾದ ಸಮಯಕ್ಕೆ ನೊಂದವರ ನೋವಿಗೆ ಸ್ಪಂದಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪೋಲೀಸ್ ಅಧಿಕಾರಿಗಳಾದ ಭಾರತಿ ಧನ್ನಿ ಹಾಗು ಯೆಶೊಧಾ ಕಟಕೆ ಮಾತನಾಡಿ, ನಮ್ಮ ಜೀವನದ ಹಂಗು ಮರೆತು ಜನರ ರಕ್ಷಣೆ ಮಾಡುತ್ತಿರುವ ಪೊಲೀಸರಿಗೆ ಜನರ ಸಹಕಾರ ಅತೀ ಅಗತ್ಯ ಎಂದು ಹೇಳಿದರು. ಇದೆ ಸಂಧರ್ಭದಲ್ಲಿ ರುದ್ರ ಸೇನಾ ಸಂಘಟನೆಯ ಸಮಾಜ ಚಿಂತಕ ವಿನೋದಕುಮಾರ್ ಅವರು ಎಲ್ಲಾ ಕೊರೊನಾ ವಾರಿಯಷ೯ಗಳಿಗೆ ಪಾದ ಪೂಜೆ ಮಾಡಿ ಸನ್ಮಾ ನಿಸಿದರು.
ಕಾರ್ಯಕ್ರಮದಲ್ಲಿ ದತ್ತು ಅಗರವಾಲ್ ಸ್ವಾಗತಿಸಿದರು ಕಾರ್ಯಕ್ರಮ ನಿರೂಪಣೆಯನ್ನು ಧನಂಜಯ ಸ್ವಾಮಿ ಮಾಡಿದರು.

ಈ ಸಂಧರ್ಭದಲ್ಲಿ ಜೆಸ್ಕಾಂ ಸಿಬ್ಬಂದಿಗಳಾದ ರಾಜುಕುಮಾರ ಇಂಡಿ, ಯಲ್ಲಾಲಿಂಗ ಬಿ ಪೂಜಾರಿ, ಮಹೇಶ ಅಗರ್ಕರ್, ಮಹಾನಗರ ಪಾಲಿಕೆ ಸಿಬ್ಬಂದಿಗಳಾದ ನಾಗೇಶ ಧುತ್ತೆ,ಸಂತೋಷ್ ತೇಲ್ಕರ್, ಅಬ್ದುಲ್, ಶಕರೆಮ್ಮ, ರಾಹುಲ ಹಾಗೂ ಸಾಮಾಜಿಕ ಕಾರ್ಯಕರ್ತರಾದ ನಿಜಲಿಂಗಪ್ಪ ಅಗ್ಗಿಮಟ್ಟ, ಲೋಕನಾಥ್ ಕುಲಕರ್ಣಿ ಅವರಿಗೆ ಪಾದ ಪೂಜೆ ಮಾಡಲಾಯಿತು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

3 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

3 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

3 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

4 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

4 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420