ಮಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಕರೆ: ಆರೋಪಿ ಬಂಧನ

0
22

ಮಂಗಳೂರು: ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇದೆಯೆಂದು ಹುಸಿ ಬೆದರಿಕೆ ಹಾಕಿದ್ದ ಓರ್ವ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿರುವ ಘಟನೆ ಇಂದು ಸಂಭವಿಸಿದೆ.

ಬಂಧಿತ ಆರೋಪಿ ಕಾರ್ಕಳ ತಾಲೂಕಿನ ಮುದ್ರಾಡಿ ಗ್ರಾಮ ನಿವಾಸಿ ವಸಂತ್‌ (33) ವರ್ಷದ ಎಂದು ಗುರುತಿಸಲಾಗಿದ್ದು, ಬುಧವಾರ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ಎಂ ಆರ್‌ ವಾಸುದೇವರಿಗೆ ಕರೆ ಮಾಡಿ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇದೆಯೆಂದು ಹುಸಿ ಬೆದರಿಕೆ ಹಾಕಿದ್ದ, ಉಡುಪಿ ಪೊಲೀಸರ ನೆರವು ಪಡೆದು ಮಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Contact Your\'s Advertisement; 9902492681

ಬೆದರಿಕೆ ಹಾಕಿರುವ ಬಗ್ಗೆ ವಾಸುದೇವ್ ರಾವ್ ಅವರು ಏರ್ ಪೋರ್ಟ್ ಅಧಿಕಾರಿಗಳಿಗೆ ಮಾಹಿತಿ ನೀಡಿದ ಪರಿಣಾಮ ತಕ್ಷಣ ಕಾರ್ಯಾಚರಣೆಗೆ ಇಳಿದ ಸಿಐಎಸ್ಎಫ್ ಸಿಬ್ಬಂದಿ ಹಾಗೂ ಪೊಲೀಸರು ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತಪಾಸಣೆ ನಡೆಸಿದರು.

ನಿಲ್ದಾಣದಲ್ಲಿ ಯಾವುದೇ ಬಾಂಬ್ ಹಾಗೂ ಅನುಮಾನಾಸ್ಪದ ವಸ್ತು ಪತ್ತೆಯಾಗಿರಲಿಲ್ಲ ಎಂದು ತಿಳಿದುಬಂದ ಹಿನ್ನೆಯಲ್ಲಿ ಇದೊಂದು ಹುಸಿ ಬಾಂಬ್ ಕರೆಯಾಗಿದೆ ಎನ್ನಲಾಗಿತ್ತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here