ಕ್ವಾರಂಟೈನ್‌ಲ್ಲಿ ಕೆಲಸ ಮಾಡಿದವರ ವೇತನ ಬಿಡುಗಡೆಗೆ ರಾಮಲಿಂಗಪ್ಪ ಆಗ್ರಹ

ಸುರಪುರ: ಕೋವಿಡ್-೧೯ ಕ್ವಾರೆಂಟೇನ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಿರುವ ಹಾಸ್ಟೇಲ್ ಹೊರಸಂಪನ್ಮೂಲ ಸಿಬ್ಬಂಧಿಗಳಿಗೆ ಬಾಕಿ ಉಳಿದಿರುವ ವೇತನ ನೀಡುವಂತೆ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದ ಜಿಲ್ಲಾ ಮುಖಂಡ ರಾಮಲಿಂಗಪ್ಪ ಬಿ.ಎನ್ ಒತ್ತಾಯಿಸಿದ್ದಾರೆ.

ಈ ಕುರಿತು ಸುರಪುರ ತಹಸೀಲ್ದಾರರಿಗೆ ಮನವಿ ಮಾಡಿಕೊಂಡಿರುವ ಅವರು, ಮಹಾಮಾರಿ ಕೊರೋನಾ ಕೋವಿಡ್-೧೯ ಕಾಯಿಲೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸುರಪುರ ತಾಲೂಕಿನಾದ್ಯಂತ ಹಾಸ್ಟೇಲ್‌ಗಳಲ್ಲಿ ಅಡಿಗೆಯವರು, ಅಡಿಗೆ ಸಹಾಯಕರು ಮತ್ತು ರಾತ್ರಿ ಕಾವಲುಗಾರರಾಗಿ ಹೊರಸಂಪನ್ಮೂಲ ಮೂಲಕ ಕಾರ್ಯನಿರ್ವಹಿಸುವ ಹಾಸ್ಟೆಲ್ ಕಾರ್ಮಿಕರನ್ನು ಕ್ವಾರೆಂಟೇನ್ ಕೇಂದ್ರಗಳಲ್ಲಿ ಇರಿಸಲಾಗಿರುವ ವ್ಯಕ್ತಿಗಳಿಗೆ ಪ್ರತಿ ದಿನ ನೀಡುವ ಆಹಾರ ಪದಾರ್ಥಗಳ ತಯಾರಿಸುವ ಕೆಲಸಕ್ಕೆ ನಿಯೋಜಿಸಿಕೊಳ್ಳಲು ಜಿಲ್ಲಾಡಳಿತದ ಆದೇಶಿಸಿತ್ತು.

ಕೆಲಸಕ್ಕೆ ನಿಯೋಜನೆಗೊಳ್ಳುವ ಕಾರ್ಮಿಕರಿಗೆ ಕನಿಷ್ಠ ವೇತನ ಆಧಾರದಡಿ ಸಮಾಜ ಕಲ್ಯಾಣ ಮತ್ತು ಬಿಸಿಎಂ ಇಲಾಖೆಗಳಿಂದ ದರ ನಿಗಧಿ ಮಾಡಿ, ವಿಪತ್ತು ನಿರ್ವಹಣಾ ಕಾಯ್ದೆ೨೦೦೫ ರ ಅಡಿಯಲ್ಲಿ ಕಾರ್ಮಿಕರು ಕೆಸಲ ಮಾಡಿರುವ ದಿನಕ್ಕೆ ಆಧರಿಸಿ ದಿನದ ವೇತನ ದರ ಅಡಿಗೆಯವರಿಗೆ ರೂ.೫೪೨, ಅಡಿಗೆ ಸಹಾಯಕರಿಗೆ ರೂ.೫೨೨ ಹಾಗು ರಾತ್ರಿ ಕಾವಲುಗಾರರಿಗೆ ರೂ.೫೦೪ ರಂತೆ ವೇತನ ನೀಡುವ ಜವಬ್ದಾರಿಯನ್ನು ಜಿಲ್ಲಾಡಳಿತದಿಂದ ತಹಸಿಲ್ದಾರರಿಗೆ ವಹಿಸಲಾಗಿದೆ.

ಆದರೆ ಸುರಪುರ ತಾಜೂಕಿನಲ್ಲಿ ಮೊದಲ ಹಂತದಲ್ಲಿ ಕಾರ್ಮಿಕ ಕೆಸಲದ ಒಂದು ದಿನಕ್ಕೆ ರೂ.೩೦೦ ರಂತೆ ಒಟ್ಟು ೨೦ದಿನಕ್ಕೆ ವೇತನ ಪಾವತಿ ಮಾಡಲಾಗಿದೆ. ಎರಡನೇ ಹಂತದಲ್ಲಿ ಒಂದು ದಿನಕ್ಕೆ ರೂ. ೫೪೪ ಹಾಗೂ ೫೨೨ ರಂತೆ ೭ ಮತ್ತು ೮ನೇ ದಿನಕ್ಕೆ ಮಾತ್ರ ವೇತನ ಪಾವತಿಸಲಾಗಿದೆ. ಕೊವಿಡ್ ಬಿಕ್ಕಟ್ಟಿನ ಸಮಯದಲ್ಲಿ ಎದೆ ಗುಂದದೆ ತಮ್ಮ ಪ್ರಾಣವನ್ನೇ ಅಪಾಯಕ್ಕೆ ಒಡ್ಡಿ ಕ್ವಾರೆಂಟೇನ್ ಕೇಂದ್ರಗಳಲ್ಲಿ ಹಗಲಿರುಳು ಸೇವೆ ಸಲ್ಲಿಸಿರುವ ಕಾರ್ಮಿಕರಿಗೆ ವೇತನ ಪಾವತಿಯಲ್ಲಿ ತಾರತಮ್ಯ ಮಾಡಿರುವುದು ಸರಿಯಾದ ಕ್ರಮವಲ್ಲ. ಆದ್ದರಿಂದ ಈ ಕುರಿತು ಮತ್ತೊಮ್ಮೆ ಮರು ಪರಿಶೀಲಿಸಿ ಜಿಲ್ಲಾಡಳಿತದ ಆದೇಶದಂತೆ ವೇತನ ನೀಡಬೇಕು ಮತ್ತು ಇಗಾಗಲೇ ಬಾಕಿ ಉಳಿಸಿಕೊಂಡಿರುವ ವೇತನವನ್ನು ಶೀಘ್ರವೇ ಬಿಡುಗಡೆ ಮಾಡಲು ತುರ್ತು ಕ್ರಮವಹಿಸಬೇಕು ಎಂದು ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420