ತೆಗೆದುಕೊಂಡ ಸಾಲ ನಿಗಧಿತ ವೇಳೆಯಲ್ಲಿ ಸಾಲ ಮರುಪಾವತಿಸಿ ಅಭಿವೃದ್ಧಿ ಹೊಂದಿ -ಕೆ.ಗುರಲಿಂಗಪ್ಪ

ಶಹಾಬಾದ:ಕೇಂದ್ರ ಸರಕಾರ ಬೀದಿ ವ್ಯಾಪಾರಸ್ಥರಿಗೆ ಯಾವುದೇ ಜಾಮೀನಿಲ್ಲದೇ ಹತ್ತು ಸಾವಿರ ರೂವರೆಗೂ ಸಾಲ ನೀಡುತ್ತಿದ್ದು, ಅದರ ಸಂಪೂರ್ಣ ಲಾಭವನ್ನು ವ್ಯಾಪರಸ್ಥರು ಪಡೆದುಕೊಳ್ಳಬೇಕೆಂದು ನಗರಸಭೆಯ ಪೌರಾಯುಕ್ತ ಕೆ.ಗುರಲಿಂಗಪ್ಪ ಹೇಳಿದರು.
ಅವರು ನಗರಸಭೆಯಿಂದ ಆಯೋಜಿಸಲಾದ ಬೀದಿ ವ್ಯಾಪಾರಿಗಳ ಮೇಲ್ ಉತ್ಸುವಾರಿ ಸಭೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತೆಗೆದುಕೊಂಡ ಸಾಲವನ್ನು ಅವಧಿಯೊಳಗೆ ಪಾವತಿ ಮಾಡಿದರೇ, ಶೇ 7ರ ಬಡ್ಡಿ ಸಹಾಯ ಧನದ ರೂಪದಲ್ಲಿ ಖಾತೆಗೆ ಜಮೆಯಾಗಲಿದೆ. ತೆಗೆದುಕೊಳ್ಳುವ ಸಾಲಕ್ಕೆ ಯಾವುದೇ ಜಾಮೀನು ಬೇಕಾಗಿಲ್ಲ. ಹತ್ತು ಸಾವಿರ ರೂ. ಸಾಲ ದೊಡ್ಡದಲ್ಲ. ಆದರೆ ಆ ಸಾಲವನ್ನು ಬೇಗನೆ ತೀರಿಸಿದರೇ ಮತ್ತೆ 20 ಸಾವಿರ ಮತ್ತು ಮುಂದೆ ಲಕ್ಷದವರೆಗೂ ಸಾಲ ಪಡೆಯುವಂತ ಅವಕಾಶ ಇದೆ. ಆದ್ದರಿಂದ ಸರಕಾರದ ಯೋಜನೆಯ ಲಾಭವನ್ನು ಪಡೆದುಕೊಂಡು ಆರ್ಥಿಕ ಮಟ್ಟವನ್ನು ಹೆಚ್ಚಿಸಿಕೊಳ್ಳುವಲ್ಲಿ ಮುಂದಾಗಿ ಎಂದು ಹೇಳಿದರು.

ಕಲಬುರಗಿ ಕೌಶಲ್ಯ ಅಭಿವೃದ್ಧಿ ಇಲಾಖೆಯ ವ್ಯವಸ್ಥಾಪಕ ಸಾತಯ್ಯ ಹಿರೇಮಠ ಮಾತನಾಡಿ,ನಗರಸಭೆಯ ವ್ಯಾಪ್ತಿಯಲ್ಲಿ ಸುಮಾರು 265 ಬೀದಿ ವ್ಯಾಪಾರಿಗಳನ್ನು ಗುರುತಿಸಿ ಸಾಲ ನೀಡಲು ಮುಂದಾಗಿದ್ದೆವೆ.ಸಕರ್ಾರ ಸಾಲ ನೀಡುತ್ತಿದೆ ಎಂದು ಸಾಲ ತೆಗೆದುಕೊಳ್ಳುವುದೊಂದೆ ಆಗಬಾರದು.ತೆಗೆದುಕೊಂಡ ಸಾಲಕ್ಕೆ ಮರುಪಾವತಿಯೂ ಆಗಬೇಕು.ಡಿಜಿಟಲ್ ಪಾವತಿಗೆ ಪ್ರೋತ್ಸಾಹ ಧನ ಸಿಗಲಿದೆ.ಪ್ರತಿಯೊಬ್ಬ ಬೀದಿ ವ್ಯಾಪಾರಿ ತಮ್ಮ ಮೊಬೈಲ್ ಸಂಖ್ಯೆಯನ್ನು ಆದಾರ್ ಲಿಂಕ್ ಮಾಡಿರಬೇಕೆಂದು ಹೇಳಿದರು.

ಕಲಬುರಗಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಕ.ಸುರೇಶಕುಮಾರ, ಎಸ್ ಬಿಐ ಬ್ಯಾಂಕ್ ವ್ಯವಸ್ಥಾಪಕ ನಾಗರಾಜ.ವಿ, ಕೆನರಾ ಬ್ಯಾಂಕ್ ವ್ಯವಸ್ಥಾಪಕ ಹಣಮಂತರಾಯ ದೇಗಾಂವ ಮಾತನಾಡಿದರು. ಕೌಶಲ್ಯ ಅಭಿವೃದ್ಧಿ ಇಲಾಖೆಯ ವ್ಯವಸ್ಥಾಪಕ ರಾಜಕುಮಾರ ಗುತ್ತೆದಾರ, ನಗರಸಭೆಯ ಸಮುದಾಯ ಅಭಿವೃದ್ಧಿ ಅಧಿಕಾರಿ ರಘುನಾಥ ನರಸಾಳೆ ಹಾಗೂ ಬೀದಿ ವ್ಯಾಪಾರಿಗಳು ಹಾಜರಿದ್ದರು.

emedia line

Recent Posts

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

2 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

7 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

7 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

9 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

20 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420