ಹಿಂದುಳಿದ ಹಾಗೂ ಶೋಷಿತ ಸಮುದಾಯ ಆಶಾಕಿರಣವಾಗಿದ್ದವರು ದೇವರಾಜ ಅರಸ್

ಶಹಾಬಾದ:ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಹಿಂದುಳಿದ ಸಮುದಾಯಗಳ ಆಶಾಕಿರಣವಾಗಿದ್ದಾರೆ ಎಂದು ಕಸಾಪ ಕಲಬುರಗಿ ಗ್ರಾಮೀಣ ಅಧ್ಯಕ್ಷ ಶರಣಗೌಡ ಪಾಟೀಲ ಹೇಳಿದರು.

ಅವರು ಗುರುವಾರ ನಗರದ ಕನ್ನಡ ಭವನದಲ್ಲಿ ಕನಕ ಸಮಿತಿ ವತಿಯಿಂದ ಆಯೋಜಿಸಲಾದ ದೇವರಾಜ ಅರಸರ ಜನ್ಮ ದಿನಾಚಾರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ದೇವರಾಜ ಅರಸರು ಕೃಷಿಕ ಕುಟುಂಬದಿಂದ ಬಂದು ಸಾಹಿತ್ಯ, ಶೈಕ್ಷಣಿಕ ಕ್ಷೇತ್ರಗಳ ಬಗ್ಗೆ ಅರಿತುಕೊಂಡು ರಾಜಕೀಯ ಮಟ್ಟದಲ್ಲೂ ಉನ್ನತ ಮಟ್ಟಕ್ಕೆ ಏರಿದರು. ಉಳುವನ ಸಂಕಷ್ಟವನ್ನು ಪರಿಹರಿಸಲು ಎಷ್ಟೇ ವಿರೋಧಗಳ ನಡುವೆಯೂ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುವುದರ ಮೂಲಕ ಉಳುವನೇ ಭೂಮಿಯ ಒಡೆಯ ಆಗುವಂತಹ ಭೂ ಸುಧಾರಣೆ ಕಾನೂನನ್ನು ಜಾರಿಗೆ ತಂದು ಹಿಂದುಳಿದ ಹಾಗೂ ಶೋಷಿತ ಸಮುದಾಯದವರು ನೆಮ್ಮದಿಯ ಜೀವನ ನಡೆಸಲು ಅರಸರೇ ಕಾರಣಿಭೂತರು ಎಂದರು.

ಹಿರಿಯ ಮುಖಂಡರಾದ ಮರಲಿಂಗ ಕಮರಡಗಿ ಪೂಜೆ ಸಲ್ಲಿಸಿದರು. ಶಿವಾನಂದ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.ಕಸಾಪ ನಗರಾಧ್ಯಕ್ಷ ಮಲ್ಲಿಕಾರ್ಜುನ್ ಪೂಜಾರಿ, ಶರಣ ಡೊಹರ ಕಕ್ಕಯ್ಯ ಸಮಾಜದ ಅಧ್ಯಕ್ಷ ರಮೇಶ ಜೋಗದನಕರ್,ಸವಿತಾ ಸಮಾಜದ ತಾಲೂಕಾಧ್ಯಕ್ಷ ದಶರಥ ಕೋಟನೂರ್,ನಾಗೇಂದ್ರ ಕುಂಟನ್,ರವಿ ಬೆಳಮಗಿ, ಶಿವಲಿಂಗಪ್ಪ ಸಿಂಪಿ, ದೇವೆಂದ್ರ ಪೂಜಾರಿ,ಯಲ್ಲಾಲಿಂಗ ಕರಗಾರ,ವಿಜಯಕುಮಾರ ಜೋಗದನಕರ್,ಬಸವರಾಜ ಇತರರು ಇದ್ದರು.

emedia line

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

13 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

13 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

13 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

13 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

13 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420