ನಾಗಮಂಗಲ: ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ದಿವಂಗತ ದೇವರಾಜ ಅರಸುರವರ ಜನ್ಮದಿನಾಚರಣೆ ಸರಳ ಹಾಗೂ ಸಾಂಕೇತಿಕವಾಗಿ ಪಟ್ಟಣದ ಹಿಂದುಳಿದ ವರ್ಗಗಳ ಇಲಾಖೆಯ ಕಚೇರಿಯಲ್ಲಿ. ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ದೇವರಾಜ ಅರಸು ರವರ ಭಾವಚಿತ್ರಕ್ಕೆ ತಹಶೀಲ್ದಾರ್ ಕುಂಞಿ ಅಹಮದ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅನಂತರಾಜು, ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಮಂಜುನಾಥ್ ಯಡ್ರಾವಿ, ರವರು ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.
ಪುಷ್ಪಾರ್ಚನೆ ಮಾಡಿ ಮಾತನಾಡಿದ ತಹಶೀಲ್ದಾರ್ ಕುಂಞಿ ಅಹಮದ್, ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಆದೇಶದಂತೆ, ದಿವಂಗತ ದೇವರಾಜ ಅರಸು ರವರ 105ನೇ ಜನ್ಮದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುತ್ತಿದೆ ದೇವರಾಜ ಅರಸುರವರು ರವರು ಒಬ್ಬ ಧೀಮಂತ ನಾಯಕ, ಹಿಂದುಳಿದ ವರ್ಗಗಳ ಹರಿಕಾರ, ಅವರ ಮುಖ್ಯಮಂತ್ರಿ ಅವಧಿಯಲ್ಲಿ ಭೂ ಸುಧಾರಣೆ ಹಾಗೂ ಉಳುವವನೇ ಭೂಮಿಯ ಒಡೆಯ ಕಾಯ್ದೆಯನ್ನು ಜಾರಿಗೆ ತಂದು ರೈತರಿಗೆ ನೆಮ್ಮದಿಯ ಬದುಕು ಕಟ್ಟಿಕೊಟ್ಟ ಧೀಮಂತ ನಾಯಕ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಯಾಗಿ ಬದುಕೋಣ ಎಂದು ತಿಳಿಸಿದರು.
ಇದೇವೇಳೆ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅನಂತರಾಜು, ರವರು ಅರಸು ಅವರು ಸಾಮಾಜಿಕ ಕಳಕಳಿಯನ್ನು ಹೊಂದಿದ್ದವರು.ಶ್ರೀ ಸಾಮಾನ್ಯರಿಗೆ ಸಾಮಾಜಿಕ ನ್ಯಾಯವನ್ನು ದೊರಕಿಸಿಕೊಟ್ಟವರು.ಹಿಂದುಳಿದ ವರ್ಗಗಳಕಲ್ಯಾಣ ಇಲಾಖೆಯನ್ನು ತೆರೆದು ಸಮಾಜದಲ್ಲಿ ಸರ್ವರಿಗೂ ಸಹಬಾಳ್ವೆಯನ್ನು ನಡೆಸಲು ಅನುವು ಮಾಡಿಕೊಟ್ಟವರು.ತೀರಾ ತಳಮಟ್ಟದಲ್ಲಿದ್ದ ಜನಾಂಗಗಳು ಸಹ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖವಾಗಿ ಪಾತ್ರ ವಹಿಸಿದರು. ಉಳುವವನೆ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತಂದವರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಂಜುನಾಥ್, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹಾಗು ಸಂತೋಷ್, ಸುಭಾಸ್ ಉಮೇಶ್, ಗುರುಮೂರ್ತಿ ಮೇಲ್ವಿಚಾರಕರುಗಳಾದ ಹರೀಶ್, ರಾಜೇಗೌಡ, ಹಿಂದುಳಿದ ವರ್ಗಗಳ ಇಲಾಖೆಯ ಸಿಬ್ಬಂದಿಗಳು ಹಾಗೂ ವಸತಿ ನಿಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ: ದೇ.ರಾ .ಜಗದೀಶ ನಾಗಮಂಗಲ
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…