ಗಣೇಶೋತ್ಸವ: ಜಿಲ್ಲೆಯಾದ್ಯಂತ ಮದ್ಯ, ಮಾಂಸ ಮಾರಾಟ ನಿಷೇಧ

ಕಲಬುರಗಿ: ಗಣೇಶ ಚತುರ್ಥಿ ಹಬ್ಬವನ್ನು 2020ರ ಆಗಸ್ಟ್ 22 ರಂದು ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ನಿಟ್ಟನಲ್ಲಿ ಈ ಕೆಳಕಂಡ ದಿನಾಂಕಗಳಂದು ಕಲಬುರಗಿ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮಾದಕ ವಸ್ತುಗಳ ಮಾರಾಟವನ್ನು ನಿಷೇಧಿಸಲಾಗಿದ್ದು, ಮದ್ಯದ ಅಂಗಡಿಗಳನ್ನು ಮುಚ್ಚಬೇಕೆಂದು ಕಲಬುರಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಶರತ್ ಬಿ. ಅವರು ಆದೇಶ ಹೊರಡಿಸಿದ್ದಾರೆ.

ಆಗಸ್ಟ್ 26 ರಂದು 5 ದಿನದ ಗಣೇಶ ವಿಗ್ರಹಗಳ ವಿಸರ್ಜನೆ, ಆಗಸ್ಟ್ 30 ರಂದು 9 ದಿನಗಳ ಗಣೇಶ ವಿಗ್ರಹ ಹಾಗೂ ಸೆಪ್ಟೆಂಬರ್ 1 ರಂದು 11 ದಿವಸಗಳ ಗಣೇಶ ವಿಗ್ರಹಗಳ ವಿಸರ್ಜನೆ ನಡೆಯಲಿದೆ. ಇದರ ಹಿನ್ನೆಲೆಯಲ್ಲಿ 2020ರ ಆಗಸ್ಟ್ 22ರ ಬೆಳಗಿನ 6 ರಿಂದ ಆಗಸ್ಟ್ 23ರ ಬೆಳಗಿನ 6 ಗಂಟೆಯವರೆಗೆ, ಆಗಸ್ಟ್ 26ರ ಬೆಳಗಿನ 6 ರಿಂದ ಆಗಸ್ಟ್ 27ರ ಬೆಳಗಿನ 6 ಗಂಟೆಯವರೆಗೆ, ಆಗಸ್ಟ್ 30 ರಂದು ಬೆಳಗಿನ 6 ರಿಂದ ಆಗಸ್ಟ್ 31 ರ ಬೆಳಗಿನ 6 ಗಂಟೆಯವರೆಗೆ ಹಾಗೂ ಸೆಪ್ಟೆಂಬರ್ 1ರ ಬೆಳಗಿನ 6 ರಿಂದ ಸೆಪ್ಟೆಂಬರ್ 2ರ ಬೆಳಗಿನ 6 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಗಣೇಶ ಚತುರ್ಥಿ ಪ್ರಯುಕ್ತ ಮಾಂಸ ಮಾರಾಟ ನಿಷೇಧ

ಕಲಬುರಗಿ ನಗರದಾದ್ಯಂತ 2020ರ ಆಗಸ್ಟ್ 22 ರಂದು ಗಣೇಶ ಚತುರ್ಥಿ ಹಬ್ಬ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಅಂದು ನಗರದಾದ್ಯಂತ ಯಾವುದೇ ರೀತಿಯ ಪ್ರಾಣಿ ವಧೆ ಮಾಡುವುದನ್ನು ಅಥವಾ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಮಹಾನಗರ ಪಾಲಿಕೆ ಆಯುಕ್ತರಾದ ರಾಹುಲ್ ಪಾಂಡ್ವೆ ಅವರು ಆದೇಶ ಹೊರಡಿಸಿದ್ದಾರೆ.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

1 hour ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

1 hour ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

1 hour ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

1 hour ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

1 hour ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420