ಸುರಪುರ: ಅರಣ್ಯ ಇಲಾಖೆಯಿಂದ ಹಸಿರು ಕರ್ನಾಟಕ ಯೊಜನೆ ಅಂಗವಾಗಿ ನಗರದ ರಂಗಂಪೇಟೆಯ ತರಕಾರಿ ಮಾರುಕಟ್ಟೆಯಲ್ಲಿ ಸಸಿ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಫಾರೆಸ್ಟ್ ರೇಂಜ್ ಆಫೀಸರ್ ಮೌಲಾಲಿ ಸಾಬ್ ಮಾತನಾಡಿ,ಸರಕಾರ ನಾಡನ್ನು ಹಸಿರುಗೊಳಿಸುವ ಮೂಲಕ ಮಳೆ ಬೆಳೆ ಚೆನ್ನಾಗಿ ಬರಲೆಂದು ಆಶಯದಿಂದ ಹಸಿರು ಕರ್ನಾಟಕ ಯೋಜನೆಯನ್ನು ಜಾರಿಗೆ ತಂದಿದೆ.ಈ ಯೋಜನೆಯಡಿಯಲ್ಲಿ ರೈತರಿಗೆ ಹಾಗು ಸಾರ್ವಜನಿಕರಿಗೂ ವಿವಿಧ ಜಾತಿಯ ಸಸಿಗಳನ್ನು ವಿತರಿಸಲಾಗುತ್ತಿದೆ ಎಂದರು.
ಸಸಿಗಳನ್ನು ತೆಗೆದುಕೊಳ್ಳುವ ರೈತರು ಮತ್ತು ಸಾರ್ವಜನಿಕರು ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಬೆಳವಣಿಗೆಗೆ ಮುಂದಾಗಬೇಕಿದೆ.ಮರಗಳು ಬೆಳೆದರೆ ಮಳೆ ಬೆಳೆಯು ಚೆನ್ನಾಗಿ ಬರಲಿದೆ.ಉತ್ತಮ ಪರಿಸರವನ್ನು ನಿರ್ಮಿಸಲು ಮರ ಬೆಳೆಸುವುದು ಮುಖ್ಯವಾಗಿದೆ.ಆದ್ದರಿಂದ ರೈತರು ಖಾಲಿ ಜಾಗಗಳಲ್ಲಿ ಮರಗಳನ್ನು ಬೆಳೆಸುವಂತೆ ತಿಳಿಸಿದರು.
ನಂತರ ಹೊಂಗೆ ಬೇವು ಹುಣಸೆ ಬಾದಾಮಿ ನಿಂಬೆ ಸೇರಿದಂತೆ ವಿವಿಧ ಜಾತಿಯ ಸುಮಾರು ಒಂದು ಸಾವಿರ ಸಸಿಗಳನ್ನು ರೈತರು ಮತ್ತು ಸಾರ್ವಜನಿಕರಿಗೆ ವಿತರಿಸಲಾಯಿತು.ಈ ಸಂದರ್ಭದಲ್ಲಿ ಡೆಪ್ಯೂಟಿ ಆರ್.ಎಫ್ಗಳಾದ ಶರಣಪ್ಪ ಕುಂಬಾರ ಪರಶುರಾಮ ನಗರಸಭೆ ಸದಸ್ಯ ಮಹ್ಮದ್ ಗೌಸ್ ಶ್ರೀಮಂತ ಚಲುವಾದಿ ಅರಣ್ಯ ರಕ್ಷಕ ಉಪಳಪ್ಪ ಸೇರಿದಂತೆ ಅನೇಕ ಜನ ಸಿಬ್ಬಂದಿಗಳು ಹಾಗು ರೈತರು ಭಾಗವಹಿಸಿದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…