ಬಸವ ತತ್ವ ಎಂದರೆ ಮೌಢ್ಯ ಬಿಟ್ಟು ವೈಚಾರಿಕವಾಗಿ ಬದುಕುವುದು: ವಿಶ್ವರಾಧ್ಯ ಸತ್ಯಂಪೇಟೆ

ಸುರಪುರ: ಬಸವಾದಿ ಶರಣರ ಅನುಭಾವದ ವಿಚಾರಗಳು ಮತ್ತು ವಚನಗಳನ್ನು ಅರಿತು ಬದುಕಿನಲ್ಲಿ ಅಳವಡಿಸಿಕೊಂಡು ನಡೆಯಬೇಕಾಗಿದೆ. ಬಸವ ತತ್ವ ಎಂದರೆ ಮೌಢ್ಯ ಬಿಟ್ಟು ವೈಚಾರಿಕವಾಗಿ ಬದುಕುವುದಾಗಿದೆ ಎಂದು ಶರಣ ಸಾಹಿತಿ ವಿಶ್ವರಾಧ್ಯ ಸತ್ಯಂಪೇಟೆ ಮಾತನಾಡಿದರು.

ನಗರದ ಸತ್ಯಂಪೇಟೆಯಲ್ಲಿ ವೀರಭದ್ರಪ್ಪ ಕೆಂಭಾವಿ ಇವರ ಮನೆಯ ಗುರು ಪ್ರವೇಶದ ಅಂಗವಾಗಿ ಹಮ್ಮಿಕೊಂಡಿದ್ದ ಮನೆಯಲ್ಲಿ ಮಹಾಮನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಮನುಷ್ಯ ಸತ್ಯ ಮತ್ತು ಪ್ರಾಮಾಣಿಕತೆಯನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಮುಖ್ಯವಾಗಿದೆ.ಎಲ್ಲರನ್ನು ಪ್ರೀತಿ ಗೌರವದಿಂದ ಕಾಣುವುದನ್ನು ಬಸವ ತತ್ವ ಕಲಿಸುತ್ತದೆ.ಇವನಾರವ ಎನ್ನದೆ ಇವ ನಮ್ಮವ ಎಂಬ ಭಾವನೆಯನ್ನು ಬೆಳೆಸುತ್ತದೆ.ಆದ್ದರಿಂದ ಎಲ್ಲರು ಬಸವಮಾರ್ಗಿಗಳಾಗೋಣ ಎಂದರು.

ಮತ್ತೋರ್ವ ಶರಣ ಸಾಹಿತಿ ಶಿವಣ್ಣ ಇಜೇರಿ ಮಾತನಾಡಿ, ಮಾತನಾಡಿ ಇಂದು ಅನೇಕರು ಬರೀ ಆಡಂಬರದ ಆಚರಣೆಗಳಿಗಾಗಿ ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡುತ್ತಾರೆ.ಆದರೆ ಬಸವ ತತ್ವ ಎಂದರೆ ಸರಳತೆಯಾಗಿದೆ.ಇಂದು ವೀರಭದ್ರಪ್ಪ ಕೆಂಭಾವಿಯವರು ವಚನಗಳ ವಿಚಾರವನ್ನು ಅರಿತು ಗುರು ಪ್ರವೇಶ ಮಾಡುತ್ತಿದ್ದಾರೆ ಇದರಿಂದ ಸರಳತೆ ಮತ್ತು ದುಂದು ವೆಚ್ಚ ದೂರವಾಗಿದೆ.ಇದೀ ಹೋಮ ಹವನವೆಂದು ಹೋಗಿದ್ದರೆ ಅನಾವಶ್ಯಕವಾಗಿ ಸಾವಿರಾರು ರೂಪಾಯಿಗಳನ್ನು ವ್ಯರ್ಥ ಮಾಡಬೇಕಾಗುತ್ತಿತ್ತು.ಇಂತಹ ಸರಳತೆಯನ್ನು ಬಸವ ತತ್ವ ಕಲಿಸುತ್ತದೆ.ಆದರೆ ಜನರಿಗೆ ಸರಳತೆಯ ಬಗ್ಗೆ ಅರಿವಿಲ್ಲದೆ ಬಸವ ಮಾರ್ಗವೆಂದರೆ ಕಡೆಗಣಿಸಿ ಕಾಣುವವರ ಸಂಖ್ಯೆ ಹೆಚ್ಚುತ್ತಿರೋದು ಬೇಸರದ ಸಂಗತಿಯಾಗಿದೆ ಎಂದರು.

ಕಾರ್ಯಕ್ರಮದ ಆರಂಭದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು.ನಂತರ ಚೆನ್ನಮಲ್ಲಿಕಾರ್ಜುನ ಗುಂಡಾನೂರ ಹಾಗು ಮಹಾದೇವಪ್ಪ ಗಾಳೆನೂರ ವಚನ ಗಾಯ ಮಾಡಿದರು.ನಂತರ ಶರಣಪ್ಪ ಯಾಳಗಿ ಹಾಗು ಇಂದೂಧರ ಸ್ವಾಮೀಜಿ ಗಡಿಸೋಮನಾಳ ಮಾತನಾಡಿದರು.ಕಾರ್ಯಕ್ರಮದಲ್ಲಿ ರೈತ ಹೋರಾಟಗಾರ ಮಲ್ಲಿಕಾರ್ಜುನ ಸತ್ಯಂಪೇಟೆ ಸೇರಿದಂತೆ ಅನೇಕರು ಭಾಗವಹಿಸಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420