ಕಲಬುರಗಿ: ಇಲ್ಲಿನ ಚಿಂಚೋಳಿ ಮತ ಕ್ಷೇತ್ರದ ರಟಕಲ್ ಗ್ರಾಮದಲ್ಲಿ ನವಜಾತ ಹೆಣ್ಣು ಶಿಶು ಒಂದನ್ನು ಚೀಲದಲ್ಲಿಟ್ಟು ಪರಾರಿಯಾಗಿರುವ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ.
ಈ ಕುರಿತು ಮಾಹಿತಿ ಪಡೆದ ಅಂಗನವಾಡಿ ಕಾರ್ಯಕರ್ತೆಯಾದ ಅನೀಸ್, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತು ರಟಕಲ್ ಪೊಲೀಸ್ ಠಾಣೆಯ ಎಸ್.ಐ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ನವಜಾತ ಶಿಶುವನ್ನು ರಕ್ಷಿಸಿ ಆರೈಕೆ ಮಾಡುವ ಮೂಲಕ ಚಿಕಿತ್ಸೆ ನೀಡುತ್ತಿದ್ದಾರೆ.
ಹೆಣ್ಣು ಶಿಶುವಿನ ಜನನ ಆಗಿರುವ ಕಾರಣ ದುಷ್ಕರ್ಮಿಗಳು ಶಿಶುವನ್ನು ರಾತ್ರಿವೇಳೆಯಲ್ಲಿ ಗ್ರಾಮದ ರಸ್ತೆಯ ಪ್ರಮುಖ ಬ್ರಿಡ್ಜ್ ಹತ್ತಿರ ಎಸೆದು ಹೋಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ.
ಈ ಕುರಿತು ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಷಯ ಅರಿಯುತ್ತಿದ್ದಂತೆ ಶ್ರೀರಾಮ ಸೇನೆಯವರು ಮಕ್ಕಳ ಸಹಾಯವಾಣಿಗೆ ಫೋನ್ ಮಾಡಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.