ಕಲಬುರಗಿ: ಇಲ್ಲಿನ ಚಿಂಚೋಳಿ ಮತ ಕ್ಷೇತ್ರದ ರಟಕಲ್ ಗ್ರಾಮದಲ್ಲಿ ನವಜಾತ ಹೆಣ್ಣು ಶಿಶು ಒಂದನ್ನು ಚೀಲದಲ್ಲಿಟ್ಟು ಪರಾರಿಯಾಗಿರುವ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ.
ಈ ಕುರಿತು ಮಾಹಿತಿ ಪಡೆದ ಅಂಗನವಾಡಿ ಕಾರ್ಯಕರ್ತೆಯಾದ ಅನೀಸ್, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತು ರಟಕಲ್ ಪೊಲೀಸ್ ಠಾಣೆಯ ಎಸ್.ಐ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ನವಜಾತ ಶಿಶುವನ್ನು ರಕ್ಷಿಸಿ ಆರೈಕೆ ಮಾಡುವ ಮೂಲಕ ಚಿಕಿತ್ಸೆ ನೀಡುತ್ತಿದ್ದಾರೆ.
ಹೆಣ್ಣು ಶಿಶುವಿನ ಜನನ ಆಗಿರುವ ಕಾರಣ ದುಷ್ಕರ್ಮಿಗಳು ಶಿಶುವನ್ನು ರಾತ್ರಿವೇಳೆಯಲ್ಲಿ ಗ್ರಾಮದ ರಸ್ತೆಯ ಪ್ರಮುಖ ಬ್ರಿಡ್ಜ್ ಹತ್ತಿರ ಎಸೆದು ಹೋಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ.
ಈ ಕುರಿತು ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಷಯ ಅರಿಯುತ್ತಿದ್ದಂತೆ ಶ್ರೀರಾಮ ಸೇನೆಯವರು ಮಕ್ಕಳ ಸಹಾಯವಾಣಿಗೆ ಫೋನ್ ಮಾಡಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…