ಸುರಪುರ: ನಗರಸಭೆ ವ್ಯಾಪ್ತಿಯ ವಾರ್ಡ್ ಸಂಖ್ಯೆ ೩೦ರ ಸತ್ಯಂಪೇಟೆಯಲ್ಲಿನ ಎಲ್ಲಾ ರಸ್ತೆಗಳು ಹದಗೆಟ್ಟಿದ್ದು ದುರಸ್ಥಿಗೊಳಿಸುವಂತೆ ಲೋಕ ಜನಶಕ್ತಿ ಪಕ್ಷದ ಜಿಲ್ಲಾಧ್ಯಕ್ಷ ರಾಜಾ ಅಪ್ಪಾರಾವ್ ನಾಯಕ್ ಸರಕಾರಕ್ಕೆ ಒತ್ತಾಯಿಸಿದರು.
ರಸ್ತೆಯಲ್ಲಿನ ತಗ್ಗು ಗುಂಡಿಗಳ ಬಳಿಯಿದ್ದು ಮಾತನಾಡಿದ ಅವರು,ನಮ್ಮ ಸತ್ಯಂಪೇಟೆಯಲ್ಲಿನ ಎಲ್ಲಾ ರಸ್ತೆಗಳು ಹಾಳಾಗಿವೆ.ಕಳೆದ ೫ ವರ್ಷಗಳ ಹಿಂದೆ ಯುಜಿಡಿ ಅಡಿಯಲ್ಲಿ ರಸ್ತೆ ನಿರ್ಮಿಸಲಾಗಿತ್ತು,ಆದರೆ ಅಂದು ನಿರ್ಮಿಸಿದ ರಸ್ತೆಗಳು ಇಂದು ಸಂಪೂರ್ಣ ಕಿತ್ತಿಹೋಗಿವೆ.ನಗರಸಭೆ ಗ್ರಾಮದತ್ತ ಸ್ವಲ್ಪವು ಗಮನಹರಿಸುತ್ತಿಲ್ಲ.ಕೇವಲ ಗ್ರಾಮದಲ್ಲಿನ ರಸ್ತೆಗಳು ಮಾತ್ರವಲ್ಲದೆ ಹಸನಾಪುರ ಪೆಟ್ರೋಲ್ ಬಂಕ್ನಿಂದ ರಾಯಚೂರು ಹೆದ್ದಾರಿಗೆ ತಲಪುವ ಕೊಳ್ಳೂರು ವರೆಗಿನ ರಸ್ತೆಯು ಹಾಳಾಗಿದೆ.ತಗ್ಗು ಗುಂಡಿಗಳಿಂದ ತುಂಬಿದ್ದರಿಂದ ಮಳೆಗಾಲವಾಗಿದ್ದರಿಂದ ರಸ್ತೆಯಲ್ಲಿ ಓಡಾಡಲಾಗದಂತಾಗಿದೆ.ಗುಂಡಿಗಳಲ್ಲಿ ನೀರು ತುಂಬಿದ್ದರಿಂದ ಈ ರಸ್ತೆಯಲ್ಲಿ ಹೋಗುವಾದ ಅನೇಕಬಾರಿ ವಾಹನಗಳು ಅಪಘಾತಕ್ಕೀಡಾಗಿ ತೊಂದರೆ ಅನುಭವಿಸಿರುವ ಘಟನೆಗಳು ನಡೆದಿವೆ.
ಆದ್ದರಿಂದ ಇಂದು ಸತ್ಯಂಪೇಟೆಯ ಎಲ್ಲಾ ಗ್ರಾಮಸ್ಥರು ಆಗ್ರಹಿಸುತ್ತಿದ್ದು ನಗರಸಭೆ ಕೂಡಲೆ ರಸ್ತೆ ದುರಸ್ಥಿಗೊಳಿಸಬೇಕು ಮತ್ತು ಕೊಳ್ಳೂರಿಗೆ ತಲುಪುವ ರಸ್ತೆ ಕಾಮಗಾರಿ ಅರ್ಧಂಬರ್ಧ ಮಾಡಿ ನಿಲ್ಲಿಸಿರುವುದನ್ನು ಕೂಡಲೆ ಮುಗಿಸುವಂತೆ ಆಗ್ರಹಿಸಿದರು.ಒಂದು ವೇಳೆ ರಸ್ತೆ ದುರಸ್ಥಿಗೊಳಿಸದಿದ್ದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…