ರತ್ತಾಳದಲ್ಲಿ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

0
120

ಸುರಪುರ: ತಾಲೂಕಿನ ರತ್ತಾಳ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ.

ಹೊನ್ನಕೆರಪ್ಪಾ ಮಲ್ಲಪ್ಪ ಗಡ್ಡದರ್  ಎಂಬ ೨೮ ವರ್ಷದ ವ್ಯಕ್ತಿಯು ತಮ್ಮ ಹೊಲದಲ್ಲಿ ಕೊಳವೆ ಬಾವಿಗೆ ಅಳವಡಿಸಲಾದ ಪಂಪ್‌ಸೆಟ್‌ಗೆ ಹಾಕಲಾದ ವಿದ್ಯುತ್ ತಂತಿಯನ್ನು ಕಟ್ಟಿಗೆಯಿಂದ ಮೇಲಕ್ಕೆ ಎತ್ತಿ ಹಾಕುತ್ತಿರುವಾಗ ವಿದ್ಯುತ್ ತಂತಿ ತುಂಡಾಗಿ ಮೇಲೆ ಬಿದ್ದಿದ್ದರಿಂದ ಶಾಕ್ ತಗುಲಿ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ.

Contact Your\'s Advertisement; 9902492681

ಘಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಈರಣ್ಣ ಹಳಿಚಂಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಸುರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here