ಸುರಪುರ: ಪ್ರತಿ ವರ್ಷದಂತೆ ಈ ವರ್ಷವು ಅಕ್ಕನಾಗಮ್ಮನವರ ಮಠದ ಜಾತ್ರೆಯನ್ನು ಆಚರಿಸಲಾಗುತ್ತಿದೆ.ಆದರೆ ಈ ವರ್ಷ ವಿಶೇಷವಾಗಿ ಶಪಥ ಭಜನೆ ನಡೆಸುವ ಮೂಲಕ ಜಗತ್ತಿನಿಂದ ಕೊರೊನಾ ನಿರ್ಮೂಲನೆಗಾಗಿ ದೇವರಲ್ಲಿ ಪ್ರಾರ್ಥಿಸಲಾಗುತ್ತಿದೆ ಎಂದು ದೇವಿಂದ್ರಯ್ಯ ಸ್ವಾಮೀಜಿ ಮಾತನಾಡಿದರು.
ಚೆನ್ನಬಸವಣ್ಣನವರ ಪೀಠ ಹಾಲಬಾವಿಯ ಶಾಖಾಮಠ ಬೊಮ್ಮನಹಳ್ಳಿಯಲ್ಲಿನ ಅಕ್ಕಮನಾಗಮ್ಮನವರ ಮಠದ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳ ನೇತೃತ್ವವಹಿಸಿ ಮಾತನಾಡಿ,ಪ್ರತಿ ವರ್ಷವು ಶ್ರಾವಣ ಮಾಸದ ಕೊನೆಯ ಸೋಮವಾರದ ನಂತರದ ಐದನೆ ದಿನದಂದು ಬೊಮ್ಮನಹಳ್ಳಿಯಲ್ಲಿ ಅಕ್ಕನಾಗಮ್ಮನವರ ಮಠದ ಜಾತ್ರೆಯನ್ನು ಆಚರಿಸಲಾಗುತ್ತದೆ.ಆದರೆ ಈ ವರ್ಷ ಜಗತ್ತಿಗೆ ಕಂಟಕವಾಗಿರುವ ಕೊರೊನಾ ವೈರಸ್ ಹಾವಳಿಯಿಂದಾಗಿ ಈ ವರ್ಷ ಸಾಂಕೇತಿಕ ಆಚರಣೆಗಳ ಮೂಲಕ ಸರಳವಾಗಿ ಜಾತ್ರೆ ಆಚರಿಸಲಾಗುತ್ತಿದೆ.ಅಲ್ಲದೆ ಈ ವರ್ಷ ವಿಶೇಷವಾಗಿ ಶಪಥ ಭಜನೆ ಮಾಡುವ ಮೂಲಕ ಕೊರೊನಾ ನಿರ್ಮೂಲನೆಗೆ ಪ್ರಾರ್ಥಿಸಲಾಗುತ್ತಿದೆ ಎಂದರು.
ಜಾತ್ರೆಯ ಅಂಗವಾಗಿ ಬೆಳಿಗ್ಗೆ ಅಕ್ಕನಾಗಮ್ಮನವರ ಗದ್ದುಗೆಗೆ ಪೂಜೆ ಸಲ್ಲಿಸಲಾಯಿತು.ನಂತರ ಪುರವಂತರ ಮೇಳದೊಂದಿಗೆ ಪಲ್ಲಕ್ಕಿ ಮೆರವಣಿಗೆ ನಡೆಯಿತು.ನಂತರ ಶಪಥ ಭಜನೆ ನಡೆಸಲಾಯಿತು.ಕಾರ್ಯಕ್ರಮದಲ್ಲಿ ಗವಿಸಿದ್ದೇಶ್ವರ ಸ್ವಾಮೀಜಿ,ಚೆನ್ನಬಸವಣ್ಣ ಸ್ವಾಮೀಜಿ,ಅಮರಯ್ಯ ಸ್ವಾಮೀಜಿ ಜಾಲಿಬೆಂಚಿ ಸೇರಿದಂತೆ ಗ್ರಾಮದ ಅನೇಕ ಮುಖಂಡರು ಮತ್ತು ಭಕ್ತಾದಿಗಳು ಭಾಗವಹಿಸಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…