ಸೇವಾ ಭದ್ರತೆ-ನಿವೃತ್ತಿ ವೇತನ ನೀಡುವಂತೆ ಭದ್ರೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದಲ್ಲಿ ವೃತ್ತಿ ಶಿಕ್ಷಣ (ಜೆಓಸಿ) ಕೋರ್ಸಿನ ಶಿಕ್ಷಖ ಮತ್ತು ಶಿಕ್ಷಕೇತರು ಸುಮಾರು ೩೫೦೦ ಜನ ಶಿಕ್ಷಕರು ಮತ್ತು ಶಕ್ಷಕೇತರು ಸುಮಾರು ೩೦ ವರ್ಷಗಳ ಕಾಲ ಅತೀ ಕಡಿಮೇ ವೇತನ ಪಡೆದು ಸುಮಾರು ಒಂದು ವರ್ಷಕ್ಕೆ ೭೦,೦೦೦ ಸಾವಿರ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿದ್ದಾರೆ. ವೃತ್ತಿಪರ ಶಿಕ್ಷಣ ಕೋರ್ಸ್ ಸರಕಾರವು ೨೦೧೧ ರಲ್ಲಿ ರದ್ದು ಮಾಡಿದೆ ಆದ್ದರಿಂದ ಸಿಬ್ಬಂದಿಗಳಿಗೆ ಸೇವಾ ಭದ್ರತೆ-ನಿವೃತ್ತಿ ವೇತನ ನೀಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ)ಯ ರಾಜ್ಯ ಸಂಘಟನಾ ಸಂಚಾಲಕ ಅರ್ಜುನ್ ಭದ್ರೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೆ ಸರಕಾರವು ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳಿಗೆ ಸರಕಾರವು ೨೦೧೩ ರಲ್ಲಿ ಖಾಯಂಗೊಳಿಸಿತ್ತು. ಆದರೆ ಖಾಯಂಗೊಮಡ ಸಿಬ್ಬಂದಿಗಳಿಗೆ ಅವರು ಸೇವೆಗೆ ಸೇರಿದ ದಿನಾಂಕದಿಂದ ಸೇವಾಭದ್ರತೆ ಮತ್ತು ಪಿಂಚಣಿ ಸೌಲಭ್ಯದಿಂದ ವಂಚಿತರನ್ನಾಗಿ ಮಾಡಲಾಗಿದೆ ಹಾಗೂ ಸಿಬ್ಬಂದಿಗಳು ಸೇವೆಯಲ್ಲಿ ಮೃತಪಟ್ಟರೆ ಅವರ ಕುಟುಂಬ ವರ್ಗದಲ್ಲಿ ಒಬ್ಬರಿಗೆ ಅನುಕಂಪದ ಆಧಾರದ ಮೇಲೆ ಸರಕಾರಿ ನೌಕರಿಗೆ ತೆಗೆದುಕೊಳ್ಳುವ ನಿಯಮ ಇರುವುದಿಲ್ಲ. ಈಗಾಗಲೇ ಅನೇಕ ಸಿಬ್ಬಂದಿಗಳು ಮೃತಪಟ್ಟಿದ್ದಾರೆ.

ಕೆಲವರು ಕೋವಿಡ್-೧೯ ರಿಂದ ಮೃತ ಪಟ್ಟಿದ್ದಾರೆ ಇವರಿಗೆ ಭದ್ರತೆಯ ಯಾವ ಅನುಕೂಲ ಆಗಿರುವುದಿಲ್ಲ. ಮೃತಪಟ್ಟ ಮತ್ತು ನಿವೃತ್ತಿ ಹೊಂದಿದ್ದ ಕುಟುಂಬವರ್ಗದ ಸಿಬ್ಬಂದಿಗಳ ಕುಟುಂಬ ಅತಂತ್ರಸ್ಥಿತಿಯಲ್ಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಮಾತವಿಯತೆ ಮತ್ತು ಅವರ ಸೇವೆಯನ್ನು ಪರಿಗಣಿಸಿ ಸರಕಾರ ಕೂಡಲೇ ಇವರಿಗೆ ಸೇವೆಗೆ ಸೇರಿದ ದಿನಾಂಕದಿಂದು ಸೇವಾಭದ್ರತೆ ಮತ್ತು ಪಿಂಚಣಿ ಸೌಲಭ್ಯ ಹಾಗೂ ಸೇವೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ಅನುಕಂಪ ಆಧಾರದ ಮೇಲೆ ಸರಕಾರಿ ನೌಕರಿಗೆ ತೆಗೆದುಕೊಳ್ಳಲು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಒತ್ತಾಯಿಸುತ್ತದೆ ಎಂದು ಭದ್ರೆ ಹೇಳಿದರು.

ಸರಕಾರ ಸದರಿ ಸಿಬ್ಬಂದಿ ವರ್ಗದವರಿಗೆ ನ್ಯಾಯ ಒದಗಿಸಿಕೊಡದೇ ಹೋದಲ್ಲಿ, ಮೃತ ಕುಟುಂಬದವರ ಜೊತೆಗೂಡಿ ಮೃತಪಟ್ಟ ಸಿಬ್ಬಂದಿಯ ಶವದೊಂದಿಗೆ ಚಳುವಳಿ ರೂಪಿಸಬೇಕಾಗುತ್ತದೆ ಸರಕಾರ ಕೂಡಲೇ ಇವರಿಗೆ ನ್ಯಾಯ ಒದಗಿಸಿಕೊಡಬೇಕು ಪತ್ರಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

emedialine

View Comments

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

13 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

13 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

13 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

13 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

13 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420