ಹಜಾಮ ಪದ ಬಳಕೆ: ಶಿಕ್ಷೆಗೆ ಒಳಪಡಿಸುವ ಕಾನೂನು ಜಾರಿಗೆ ಒಕ್ಕೂಟ ಆಗ್ರಹ

ಬೆಂಗಳೂರು: ಹಜಾಮ/ಅಜಾಮ ಪದವನ್ನು ಬಳಸಿ ಬೈಯುವರನ್ನು ಶಿಕ್ಷೆಗೆ ಒಳಪಡಿಸಲು ಅನುವು ಮಾಡಿಕೊಡುವ ಕಾನೂನು ಜಾರಿಗೆ ತನ್ನಿ ಎಂದು ಕರ್ನಾಟಕ ರಾಜ್ಯ ಕ್ಷೌರಿಕರ ಮೀಸಲಾತಿ ಒಕ್ಕೂಟದ ರಾಜ್ಯಾಧ್ಯಕ್ಷ ಎಂ.ಬಿ. ಶಿವಕುಮಾರ್‌ ಆಗ್ರಹಿಸಿದ್ದಾರೆ.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್‌ ಸದಸ್ಯರಾದ ರವಿಕುಮಾರ್‌ ಅವರ ನೇತೃತ್ವದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿರುವ ಅವರು ಮಾತನಾಡಿ, ಆಡು ಮುಟ್ಟದ ಸೊಪ್ಪಿಲ್ಲ ಕ್ಷೌರಿಕ ಮುಟ್ಟದ ಜನರಿಲ್ಲ ಆದರೆ ನಮಗೆ ಸಾಮಾಜಿಕವಾಗಿ ಗೌರವ ದೊರೆಯುತ್ತಿಲ್ಲ. ಎಲ್ಲಾ ವರ್ಗದ ಭಯದ ನೆರಳಿನಲ್ಲಿ ಅಪಹಾಸ್ಯ, ಅವಮಾನ, ಹಿಂಸೆ, ನಿಂದನೆ ಹಾಗೂ ಎಲ್ಲಾ ವರ್ಗಗಳ ಬಾಯಿಯ ಬೈಗುಳದ ತುತ್ತಾಗಿ ಅಪಮಾನಕ್ಕೆ ಒಳಗಾಗಿ ಮಾನಸಿಕ ಹಿಂಸೆ ಅನುಭವಿಸಿಕೊಂಡು ಅಪಹಾಸ್ಯಕ್ಕೆ ತುತ್ತಾಗಿದ್ದೇವೆ ಎಂದು ವಿಷಾದ ವ್ಯಕ್ತಪಡಿಸಿದರು.

ಇಂತಹ ದಾರುಣ ಪರಿಸ್ಥಿತಿ ನಮ್ಮ ಮುಂದಿನ ಪೀಳಿಗೆ ಅನುಭವಿಸಬಾರದು ಎನ್ನುವ ಸದುದ್ದೇಶದಿಂದ ಹಜಾಮ/ಅಜಾಮ ಪದವನ್ನು ಬಳಸಿ ಅಪಮಾನ ಮಾಡಿದರೆ ಅಂತಹವರನ್ನು ಶಿಕ್ಷೆಗೆ ಒಳಪಡಿಸುವಂತಹ ಕಾನೂನನ್ನು ಜಾರಿಗೆ ತರುವ ಅವಶ್ಯಕತೆ ಇದೆ. ಈ ಹಿನ್ನಲೆಯಲ್ಲಿ ಕಾನೂನು ಜಾರಿಗೊಳಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡುವ ಮೂಲಕ ಸಾಮಾಜಿಕ ನ್ಯಾಯ ದೊರಕಿಸಿಕೊಡುವಂತೆ ವಿನಂತಿ ಮಾಡಿಕೊಂಡಿದ್ದೇವೆ ಎಂದರು.

ಈ ಸಂಧರ್ಭದಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್‌ ಸದಸ್ಯರಾದ ರವಿಕುಮಾರ್‌ ಮತ್ತು ಬೆಂಗಳೂರು ನಗರ ಅಧ್ಯಕ್ಷ ಹೆಚ್‌.ಎನ್‌ ನರಸಿಂಹಮೂರ್ತಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420