ಮತದಾರರ ಪಟ್ಟಿ ಪರಿಷ್ಕರಣೆ ಆರಂಭ: ಸುರೇಶ ವರ್ಮಾ

ಶಹಾಬಾದ: ಭಾವಚಿತ್ರವುಳ್ಳ ಮತದಾರರ ಪಟ್ಟಿ ತಯಾರಿಕೆ ಹಾಗೂ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ ಆರಂಭಗೊಂಡಿದ್ದು, 2021ರ ಜನೇವರಿ 1ಕ್ಕೆ 18 ವರ್ಷ ಪೂರೈಸಿದ ಕ್ಷೇತ್ರದ ವ್ಯಾಪ್ತಿಯ ಅರ್ಹ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊಳ್ಳಬೇಕೆಂದು ತಹಸೀಲ್ದಾರ ಸುರೇಶ ವರ್ಮಾ ತಿಳಿಸಿದ್ದಾರೆ.
ಅರ್ಹ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಲು ಸಂಬಂಧಪಟ್ಟ ಮತಗಟ್ಟೆ ಅಧಿಕಾರಿಗಳಿಗೆ  ನಮೂನೆ 6ರಲ್ಲಿ ಅರ್ಜಿ ಸಲ್ಲಿಸಬೇಕು ಹಾಗೂ ಹೆಸರು ತಿದ್ದುಪಡಿ, ಬದಲಾವಣೆ, ಸ್ಥಳಾಂತರ ಇದ್ದಲಿ ನಿಗದಿ ಪಡಿಸಿದ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಚುನಾವಣೆ ಆಯೋಗದ ಅರ್ಹತಾ ದಿನಾಂಕ 1.1.2021 ಆಧರಿಸಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಗಳಿಗಾಗಿ ಆಗಸ್ಟ್ 10 ರಿಂದ 31ರ ವರೆಗೆ ಮತದಾನ ಕೇಂದ್ರಗಳಲ್ಲಿ ಹೆಸರು ತೆಗೆದು ಹಾಕುವುದು, ಹೊಸದಾಗಿ ಸೇರ್ಪಡೆ ಕಾರ್ಯ ನಡೆಸಲಾಗುತ್ತದೆ. ನವೇಂಬರ್ 1 ರಿಂದ 15ರ ವರೆಗೆ ನಮೂನೆಗಳು ತಿದ್ದುಪಡಿ ಕಾರ್ಯ ಹಾಗೂ ಕರಡು ಮತದಾರರ ಪಟ್ಟಿ ಪ್ರಕಟಣೆ ಪೂರ್ವ ಸಿದ್ಧತೆ ಕೈಗೊಂಡು ನವೆಂಬರ್ 16ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ನವೆಂಬರ್ 16ರಿಂದ ಡಿಸೆಂಬರ 15ರ ವರೆಗೆ ಕರಡು ಮತದಾರರ ಪಟ್ಟಿಗೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗುವುದು. ನಂತರ ಮುಖ್ಯ ಚುನಾವಣಾಧಿಕಾರಿ ಕರನಾಟಕ ಇವರು ಸೂಚಿಸುವ ಎರಡು ಶನಿವಾರ ಭಾನುವಾರಗಳಿಂದ ವಿಶೇಷ ಆಂದೋಲನ ಕೈಗೊಂಡು ಕರಡು ಮತದಾರರ ಪಟ್ಟಿಗೆ ಸ್ವೀಕೃತ ಆಕ್ಷೇಪಣೆಗಳನ್ನು ವಿಲೆವಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
2021 ಜನವರಿ 5 ರೊಳಗಾಗಿ ವಿಲೇವಾರಿ ಮಾಡಲಾಗುವುದು ಜನವರಿ 14ರ ಒಳಗಾಗಿ ಚುನಾವಣೆ ಆಯೋಗದಿಂದ ಅನುಮತಿ ಪಡೆದುಕೊಂಡು ಜನವರಿ 15ರಿಂದ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

emedia line

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

11 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

11 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

11 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420