ಸುರಪುರ: ಅನೇಕ ಐತಿಹಾಸಿಕ ದಾಖಲೆಗಳನ್ನು ಹೊಂದಿರುವ ಸುರಪುರ ತಾಲೂಕಿನಲ್ಲಿ ಸಂಶೋಧನಾ ಕೇಂದ್ರಿತ ವಿಶ್ವವಿದ್ಯಾಲಯದ ಸ್ಥಾಪಿಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ನಗರಕ್ಕೆ ಆಗಮಿಸಿದ್ದ ಕಂದಾಯ ಸಚಿವ ಆರ್.ಅಶೋಕ ಅವರ ಮೂಲಕ ಮನವಿ ಸಲ್ಲಿಸಿ ಮಾತನಾಡಿದ ಎಬಿವಿಪಿ ಕಲಬುರ್ಗಿ ವಿಭಾಗದ ಸಹ ಪ್ರಮುಖ ಡಾ: ಉಪೇಂದ್ರ ನಾಯಕ ಸುಬೇದಾರ ಮಾತನಾಡಿ,ಸುರಪುರ ತಾಲೂಕು ಅನೇಕ ಐತಿಹಾಸಿಕ ಹಿನ್ನೆಗಳನ್ನು ಹೊಂದಿರುವಂತ ತಾಲೂಕಾಗಿದೆ.ಕೊಡೇಕಲ್ನ ಕಾಲಜ್ಞಾನಿ ಬಸವಣ್ಣ ಲೋಕದ ಕುರಿತು ಕಾಲಜ್ಞಾನ ರಚಿಸಿದ್ದಾರೆ.
ಅಲ್ಲದೆ ಅನೇಕ ಜೈನ ಧರ್ಮದ ದೇವಾಲಯಗಳು ಹಾಗು ಋಷಭನಾಥ ಮಹಾವೀರರ ಮೂರ್ತಿಗಳು ಇದೇ ತಾಲೂಕಿನಲ್ಲಿ ದೊರೆತಿವೆ.ಸುರಪುರ ಸಂಸ್ಥಾನವು ಐತಿಹಾಸಿಕ 12 ಜನ ಅರಸರು ಆಳ್ವಿಕೆ ನಡೆಸಿದ್ದು,ಅಲ್ಲದೆ 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೆ ನಾಂದಿ ಹಾಡಿದ್ದು ಸುರಪುರ ಅರಸರು.ಅಲ್ಲದೆ 15ನೇ ಶತಮಾನದಲ್ಲಿ ಮೋಘಲರು ಮತ್ತು ಬ್ರಿಟೀಷರ ವಿರುಧ್ಧ ಹೋರಾಡಿದ ವೀರಭೂಮಿ ಸುರಪುರ ಇತಿಹಾಸಕ್ಕಿದೆ ಇಂತಹ ಅನೇಕ ಸಂಗತಿಗಳ ಕುರಿತು ಜಗತ್ತಿಗೆ ತಿಳಿಯಲು ತಾಲೂಕಿನಲ್ಲಿ ಸಂಶೋಧನಾ ಕೇಂದ್ರಿತ ವಿಶ್ವವಿದ್ಯಾಲಯ ಸ್ಥಾಪನೆ ಅವಶ್ಯವಾಗಿದೆ.ಇದಕ್ಕೆ ಸರಕಾರ ಮುತುವರ್ಜಿ ವಹಿಸಿ ಸ್ಥಾಪಿಸಿದಲ್ಲಿ ಸುರಪುರ ಇತಿಹಾಸ ಅಜರಾಮರವಾಗಿ ಉಳಿಯಲಿದೆ ಎಂದರು.
ನಂತರ ಮನವಿ ಪತ್ರವನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಶಾಸಕ ನರಸಿಂಹ ನಾಯಕ (ರಾಜುಗೌಡ) ಹಾಗು ಎಬಿವಿಪಿಯ ಕಲಬುರ್ಗಿ ವಿಭಾಗಿಯ ಸಹ ಸಂಚಾಲಕ ನಾಗರಾಜ ಮಕಾಶಿ,ನಗರ ಕಾರ್ಯದರ್ಶಿ ಪರಶುರಾಮ ಬೈಲಕುಂಟಿ ಕ್ಯಾತಪ್ಪ ಮೇದಾ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…