ಸುರಪುರ: ಈಬಾರಿ ಏನು ನೆರೆಯಿಂದ ಬೆಳೆ ಹಾನಿಯಾಗಿದೆ ಇದಕ್ಕೆ ಎನ್ಡಿಆರ್ಎಫ್ ನಿಯಮದಂತೆ ಪರಿಹಾರ ನೀಡಲಾಗುವುದು ಹಾಗೂ ಮನೆಗಳು ಕಳೆದಕಕೊಂಡವರಿಗೆ ಕಳೆದ ಬಾರಿಯಂತೆ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.
ಕಳೆದ ಕೆಲ ದಿನಗಳ ಹಿಂದೆ ಸುರಿದ ಮಳೆಯಿಂದ ಉಂಟಾದ ನೆರೆ ಹಾನಿ ವೀಕ್ಷಣೆಗೆ ಆಗಮಿಸಿದ್ದ ಸಚಿವರು ಸುದ್ದರಿಗಾರರೊಂದಿಗೆ ಮಾತನಾಡಿದರು. ಕಳೆದ ಬಾರಿ ನೆರೆ ಪರಿಹಾರ ವಿತರಣೆಯಲ್ಲಾದ ದೋಷದ ಬಗ್ಗೆ ಕೇಳಲಾದ ಪ್ರಶ್ನೆಗೆ ವಿವರಣೆ ನೀಡಿ, ಈ ಕುರಿತು ಅಧಿಕಾರಿಗಳೂಂದಿಗೆ ಚರ್ಚಿಸಿ ಆರೀತಿಯೇನಾದರು ಲೋಪಗಳು ಕಂಡುಬಂದಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ತಾಲೂಕಿನ ದೇವಾಪುರ ಹಳ್ಳದ ಸೇತುವೆ ಮೇಲೆ ಕೆಲ ನಿಮಿಷಗಳ ಕಾಲ ನಿಂತು ನೇರೆ ಪೀಡಿತ ಸ್ಥಳಗಳನ್ನು ವೀಕ್ಷಿಸಿದರು. ರಸ್ತೆಯಲ್ಲಿಯೆ ನಿಂತು ನೆರೆ ವೀಕ್ಷಣೆ ನಡೆಸಿದ್ದಕ್ಕೆ ಸಂತ್ರಸ್ಥರು ಬೇಸರ ವ್ಯಕ್ತಪಡಿಸಿ ಈರೀತಿ ನೆರೆ ವೀಕ್ಷಣೆ ನಡೆಸುವುದಾದರೆ ಇವರು ಬೆಂಗಳೂರಿನಿಂದ ಇಲ್ಲಿಯವರೆಗೂ ಬರುವ ಅವಶ್ಯಕತೆ ಇದ್ದಿಲ್ಲಾ ಕಳೆದಬಾರಿ ನಮಗಾದ ನಷ್ಟ ಪರಿಹಾರವನ್ನು ಸರ್ಕಾರ ಇನ್ನು ವಿತರಣೆ ಮಾಡಿಲ್ಲಾ ಈಗ ಈರೀತಿ ಸಚಿವರು ನೆರೆ ಸಮೀಕ್ಷೆ ನಡೆಸಿರುವುದನ್ನು ನೋಡಿದರೆ ಈ ಬಾರಿಯೂ ನಮಗೆ ಪರಿಹಾರ ದೊರಕುವುದು ಅನುಮಾನವಿದೆ ಎಂದು ಜನರು ಅಸಮಾಧಾನವನ್ನು ಹೊರಹಾಕಿದ್ದು ಕಂಡುಬಂತು.
ಈ ಸಂದರ್ಭದಲ್ಲಿ ಶಾಸಕ ನರಸಿಂಹ ನಾಯಕ (ರಾಜುಗೌಡ) ಜಿಪಂ ಅಧ್ಯಕ್ಷ ಬಸನಗೌಡ ಯಡಿಯಾಪುರ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಡಿಸಿ ಶಂಕರಗೌಡ ಸೋಮನಾಳ ಸೇರಿದಂತೆ ಇನ್ನಿತರ ಮುಖಂಡರು ಹಾಗೂ ಅಧಿಕಾರಿಗಳಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…