ಕಲಬುರಗಿ: ಸಾಹಿತಿ ಡಾ. ಈಶ್ವರಯ್ಯ ಮಠ ಅವರು ಕಲ್ಯಾಣ ಕರ್ನಾಟಕ ಕಂಡ ಒಬ್ಬ ಪ್ರತಿಭಾನ್ವಿತ ಕನ್ನಡ ಪ್ರಾಧ್ಯಾಪಕ. ಉತ್ತಮ ವಾಗ್ಮಿ. ಅಪಾರ ಶಿಷ್ಯ ಬಳಗದ ಆದರ್ಶ ಶಿಕ್ಷಕ. ಕನ್ನಡ ಕಾಳಜಿಯ ಚಿಂತಕ. ಎದುರಿಗೆ ಕುಳಿತವರನ್ನು ತಮ್ಮ ಮಾತಿನಮೂಲಕ ಸೆಳೆಯುವ ಶೈಲಿ ಅವರಿಗೆ ಕರಗತವಾಗಿತ್ತು. ಬೆಂಗಳೂರು ಬಸವ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ, ಪ್ರಾರಂಭದಲ್ಲಿ ಕಲಬುರಗಿ ಬಸವ ಸಮಿತಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಬೆಂಗಳೂರು ಬಸವ ಸಮಿತಿಯ ಅಧ್ಯಕ್ಷರಾದ ಅರವಿಂದ ಜತ್ತಿ ತಿಳಿಸಿದರು.
ಅವರ ಸೇವೆ ಇನ್ನೂ ಬೇಕಿತ್ತು. ಅವರ ಅಕಾಲಿಕ ಮರಣದಿಂದಾಗಿ ಎಲ್ಲರಿಗೂ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಪತ್ನಿ, ಮಕ್ಕಳಿಗೆ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಬಸವಾದಿ ಶರಣರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇಸುವೆ ಎಂದರು.
ರಾಜ್ಯ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಬಸವ ಸಮಿತಿಯ ಅಧ್ಯಕ್ಷರಾದ ಡಾ. ವಿಲಾಸವತಿ ಖೂಬಾ, ಉಪಾಧ್ಯಕ್ಷರಾದ ಡಾ. ಜಯಶ್ರೀ ದಂಡೆ, ಡಾ. ಬಿ. ಡಿ. ಜತ್ತಿ ವಚನ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ನಿರ್ದೇಶಕರಾದ ಡಾ.ವೀರಣ್ಣ ದಂಡೆ, ಪ್ರಧಾನ ಕಾರ್ಯದರ್ಶಿಗಳಾದ ಹೆಚ್.ಕೆ. ಉದ್ದಂಡಯ್ಯ ಮತ್ತು ಎಲ್ಲಾ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…