ಶಹಾಬಾದ:ನಗರದ ಬೀದಿ ನಾಯಿಗಳ ದಾಳಿಗೆ ಇಬ್ಬರು ಬಾಲಕರು ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ ಸಾಯಂಕಾಲ ನಡೆದಿದೆ.ವಾರ್ಡ ನಂ.27 ರಲ್ಲಿ ಬೀದಿ ನಾಯಿಗಳು ಮನೆಯ ಮುಂದೆ ಕುಳಿತ ಬಾಲಕರ ಮೇಲೆ ದಾಳಿ ನಡೆಸಿ ಕೈಯಿಗೆ, ಹಾಗೂ ಹೊಟ್ಟೆಗೆ ಕಚ್ಚಿ ಗಾಸಿಗೊಳಿಸಿವೆ. ಘಟನೆಯಿಂದ ಇಬ್ಬರು ಬಾಲಕರು ಗಾಯಗೊಂಡಿದ್ದು, ಇವರನ್ನು ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ನಿರ್ಲಕ್ಷ್ಯ ತೋರುತ್ತಿರುವ ನಗರಸಭೆ: ಬೀದಿನಾಯಿಗಳನ್ನು ನಿಯಂತ್ರಿಸಲು ಹಲವಾರು ಬಾರಿ ನಗರಸಭೆಯ ಸದಸ್ಯರು ಹಾಗೂ ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ.ಈಗಾಗಲೇ ನಿರಂತರವಾಗಿ ನಾಯಿ ಕಡಿತದಿಂದ ಗಂಭೀರವಾಗಿ ಹಲವಾರು ಗಾಯಗಳಾದ ಘಟನೆಗಳು ನಡೆದಿದ್ದು, ಆ ಬಗ್ಗೆಯೂ ತಿಳಿಸಿಲಾಗಿದೆ.ಆದರೆ ನಗರಸಭೆಯ ಅಧಿಕಾರಿಗಳು ನಿಯಂತ್ರಿಸಲು ಸಾಧ್ಯವಾಗದೇ ಅಸಹಾಯಕರಾಗಿ ಕೈ ಚೆಲ್ಲಿ ಕುಳಿತ್ತಿದ್ದಾರೆ ಎಂದು ಮುಖಂಡ ಇಮ್ರಾನ್ ಆರೋಪಿಸಿದ್ದಾರೆ. ನಗರಸಭೆಯ ಆಡಳಿತ ವರ್ತನೆಯಿಂದ ಬೇಸತ್ತ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…