ಜೇವರ್ಗಿ: ಇಲ್ಲಿನ ಬಿಜೆಪಿ ತಾಲೂಕ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರಾಜ್ಯ ಸರಕಾರವು ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ್
ಸನ್ಮಾನವನ್ನು ಏರ್ಪಡಿಸಿ ಮಾತನಾಡಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಕರೋನ ಸಮಯದಲ್ಲಿ ಸಮರ್ಥವಾಗಿ ಮುನ್ನಡೆಸಿದ ಹೆಗ್ಗಳಿಕೆ ನಳಿನ್ ಕುಮಾರ್ ಕಟೀಲ್ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು ಇವರ ಅವಧಿಯಲ್ಲಿ ಪಕ್ಷವು ಸಮರ್ಥವಾಗಿ ಮುನ್ನಡೆದಿದೆ ಹಾಗೂ ಪಕ್ಷದ ಚುಕ್ಕಾಣಿ ಹಿಡಿದುಕೊಂಡು ಸಮರ್ಥವಾಗಿ ಸಮಸ್ಯೆಗಳನ್ನು ಎದುರಿಸಿ ಮುನ್ನುಗ್ಗುತ್ತಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಚಿವ ಪ್ರಭು ಚೌಹಾಣ್ ಹಾಗೂ ಎನಿ ಕೆಎಸ್ಆರ್ಟಿಸಿ ನೂತನ ಅಧ್ಯಕ್ಷರಾದ ರಾಜಕುಮಾರ್ ಪಾಟೀಲ್ ತೆಲ್ಕರ್ ಇವರನ್ನು ಸಹ ಸನ್ಮಾನಿಸಲಾಯಿತು.
ಇಲ್ಲಿನ ಕಲಬುರಗಿ ಮಾರ್ಗವಾಗಿ ಯಾದಗಿರಿಗೆ ತೆರಳುತ್ತಿದ್ದಾಗ ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಬಳಿಯಿರುವ ಬಿಜೆಪಿ ತಾಲೂಕ ಕಚೇರಿಯಲ್ಲಿ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಬಿ.ಜಿ ಪಾಟೀಲ್ ,ಸುನಿಲ್ ಲ್ ಕೊಲ್ಲಾಪುರ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಶಿವರಾಜ್ ಪಾಟೀಲ್ ರದ್ದೇವಾಡಗಿ, ರೇವಣಸಿದ್ಧ ಸಂಕಲಿ, ಪಕ್ಷದ ಮುಖಂಡರಾದ ರಮೇಶ್ ಬಾಬು ವಕೀಲ್, ದೇವೇಂದ್ರಗೌಡ ಮಾಗಣಗೇರಾ, ಪಕ್ಷದ ತಾಲೂಕ ಅಧ್ಯಕ್ಷರಾದ ಭೀಮರಾವ್ ಗುಜಗೊಂಡ, ಪುರಸಭೆ ಸದಸ್ಯರಾದ ಷಣ್ಮುಖಪ್ಪ ಸಾಹು , ಗುರುಶಾಂತಯ್ಯ ಸ್ವಾಮಿ, ಗುರುಪಾದ ಮಾಲಿಪಾಟೀಲ್ ಸೇರಿದಂತೆ ಚಂದನ ಮಹಿಂದ್ರಕರ್, ಸಾಹೇಬಗೌಡ ಕಲಾ ಹಾಗೂ ರಾಜು ರದ್ದೇವಾಡ್ಗಿ, ಸೇರಿದಂತೆ ಮುಖಂಡರಾದ ಬಾಬು ಪಾಟೀಲ ಮುದ್ದುಗೌಡ ಶರಣು ಕೋಳಕೂರ ಇತರರು ಉಪಸ್ಥಿತರಿದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…