ಬಿಸಿ ಬಿಸಿ ಸುದ್ದಿ

ಮಂಗಳೂರಿಗೆ ನಿತ್ಯ ರಾತ್ರಿ ವಿದ್ಯೂತ್ ಸಂಪರ್ಕ ಕಡಿತ ವಿರೋಧಿಸಿ ಮನವಿ

ಸುರಪುರ: ತಾಲ್ಲೂಕಿನ ಮಂಗಳೂರು ಗ್ರಾಮಕ್ಕೆ ಕಳೆದ ಒಮದು ವಾರದಿಂದ ನಿತ್ಯ ರಾತ್ರಿ ವಿದ್ಯೂತ್ ಸಂಪರ್ಕ ಕಡಿತಗೊಳಿಸುತ್ತಿದ್ದು ಇದರಿಂದ ಗ್ರಾಮದಲ್ಲಿ ಕಳ್ಳತನದ ಪ್ರಕರಣಗಳು ಜರುಗುತ್ತಿವೆ ಎಂದು ಆರೋಪಿಸಿ ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಯಾದಗಿರಿ ಜಿಲ್ಲಾ ಆದಿವಾಸಿಗಳ ಜೀವನ ಮಟ್ಟ ಸುಧಾರಣಾ ಸಮಿತಿ ಸದಸ್ಯ ಭೀಮರಾಯ ಒಂಟೆತ್ತು ಮಾತನಾಡಿ,ಮಂಗಳೂರು ಗ್ರಾಮದಲ್ಲಿ ಕಳೆದ ಒಮದು ವಾರದಿಂದ ನಿತ್ಯ ರಾತ್ರಿ ಗ್ರಾಮದಲ್ಲಿ ವಿದ್ಯೂತ್ ಕಡಿತಗೊಳಿಸಲಾಗುತ್ತಿದೆ.ಇದರಿಂದ ಅನೇಕ ಕಳ್ಳತನ ಪ್ರಕರಣಗಳು ನಡೆದಿವೆ,ಇನ್ನೂ ಹೆಚ್ಚಾಗುವ ಭೀತಿಯಿಂದಾಗಿ ಜನತೆ ರಾತ್ರಿ ನಿದ್ದೆ ಬಿಟ್ಟು ಕಳಿತುಕೊಳ್ಳುವಂತಾಗಿದೆ.ನಿರಂತರ ಜ್ಯೋತಿ ಎಂದು ಹೇಳಲಾಗುತ್ತಿದೆ ಆದರೆ ಮಂಗಳೂರು ಗ್ರಾಮಕ್ಕೆ ಕತ್ತಲೆ ಭಾಗ್ಯ ನೀಡಿದಂತಾಗುತ್ತಿದೆ.ಆದ್ದರಿಂದ ಕೂಡಲೆ ವಿದ್ಯೂತ್ ಕಡಿತಗೊಳಿಸುವುದನ್ನು ನಿಲ್ಲಿಸಿ ನಿರಂತರ ವಿದ್ಯೂತ್ ನೀಡಬೇಕೆಂದರು.

ಗ್ರಾಮದ ಅನೇಕ ಓಣಿಗಳಲ್ಲಿ ವಿದ್ಯೂತ್ ಕಂಬ ಅಳವಡಿಸಲು ದೀನ ದಯಾಳ ಉಪಾಧ್ಯಾಯ ಯೋಜನೆಯಡಿ ಕಂಬಗಳು ಮಂಜೂರಾದರು ವಿದ್ಯೂತ್ ಕಂಬಗಳು ಹಾಕಿಲ್ಲ ಕೂಡಲೆ ವಿದ್ಯೂತ್ ಕಂಬ ಹಾಕಿ ವಿದ್ಯೂತ್ ಸಂಪರ್ಕ ಕಲ್ಪಿಸುವಂತೆ ಒತ್ತಾಯಿಸಿದರು.

ನಂತರ ಜೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಬರೆದ ಮನವಿಯನ್ನು ಜೆಸ್ಕಾಂ ಕಚೇರಿ ಸಿರಸ್ತೆದಾರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ತಿರುಪತಿ ನಾಯಕ ತನಿಕೇದಾರ,ಭೀಮನಗೌಡ ಪಾಟೀಲ, ಹುಸೇನಭಾಷಾ ಹಾದಿಮನಿ,ಶರಣಬಸವ ಬಡಿಗೇರ,ನಂದಪ್ಪ ದೊರೆ ಸೇರಿದಂತೆ ಇತರರಿದ್ದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

1 hour ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

5 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

10 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

23 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420