ಆಳಂದ: ಪಟ್ಟಣದ ವಿವಿಧ ವಾರ್ಡಗಳಲ್ಲಿ ವಿವಿಧ ಕಾಮಗಾರಿಗಳಿಗೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಚಾಲನೆ ನೀಡಿದರು.
ಪಟ್ಟಣದ ಪುರಸಭೆಯ ವಿವಿಧ ವಾರ್ಡಗಳಲ್ಲಿ 2019-20ನೇ ಸಾಲಿನ 14ನೇ ಹಣಕಾಸು ಯೋಜನೆಯ ಅಡಿಯಲ್ಲಿ 12 ಪ್ಯಾಕೇಜಗಳ ಅನುದಾನದಲ್ಲಿ ಒಟ್ಟು 2.64 ಲಕ್ಷ. ರೂ ವೆಚ್ಚದ ಸಿಸಿ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗಳಿಗೆ ರವಿವಾರ ಚಾಲನೆ ನೀಡಿ ಮಾತನಾಡಿದರು.
ಆಳಂದ ಪಟ್ಟಣದ ಅಭಿವೃದ್ಧಿಗೆ ತಾವು ಕಂಕಣಬದ್ಧರಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ತಂದು ಪಟ್ಟಣವನ್ನು ಅಭಿವೃದ್ಧಿಪಡಿಸಲಾಗುವುದು ಈ ನಿಟ್ಟಿನಲ್ಲಿ ಸರ್ಕಾರದ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದರು.
ಆಳಂದ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ಸರಬರಾಜು ಮಾಡಲು 7 ಕೋಟಿ ಅನುದಾನ ಮಂಜೂರಾಗಿದ್ದು ಅಮರ್ಜಾದಿಂದ ನೀರು ಆಳಂದ ಪಟ್ಟಣಕ್ಕೆ ನೀರು ತರುವ ಕಾರ್ಯ ಪ್ರಗತಿಯಲ್ಲಿದೆ ಅದಕ್ಕೆ ಬೇಕಾಗಿರುವ ಪೈಪುಗಳು ಈಗಾಗಲೇ ಬಂದಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಅಶೋಕ ಗುತ್ತೇದಾರ, ವಿಜಯಕುಮಾರ ಕೋಥಳಿಕರ, ಪುರಸಭೆ ಮುಖ್ಯಾಧಿಕಾರಿ ಬಾಬುರಾವ ವಿಭೂತೆ, ಕಿರಿಯ ಅಭಿಯಂತರ ಜಗದೀಶ, ಪುರಸಭೆ ಸದಸ್ಯರಾದ ಶ್ರೀಶೈಲ ಪಾಟೀಲ, ಮೃತ್ಯುಂಜಯ ಆಲೂರೆ, ಮೀರ ಅಹ್ಮದ್, ಸಂತೋಷ ಹೂಗಾರ, ಸೋಮು ಹತ್ತರಕಿ, ಶ್ರೀಶೈಲ ಖಜೂರಿ, ಪ್ರಭಾಕರ ಘನಾತೆ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…