ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಚಿವ ಶೆಟ್ಟರ್ ಗೆ ಮನವಿ

0
72

ಕಲಬುರಗಿ: ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕು ಮತ್ತು ಯಾವುದೇ ಕಾರಣಕ್ಕೂ ಸೇವೆಯಿಂದ ಕೈಬಿಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ಕಲಬುರ್ಗಿ ಜಿಲ್ಲಾ ಸಮಿತಿಯಿಂದ ಕರ್ನಾಟಕ ಸರ್ಕಾರದ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಮಂಗಳವಾರ ಮನವಿ ಪತ್ರವನ್ನು ಸಲ್ಲಿಸಲಾಯಿತು.

ರಾಜ್ಯದಲ್ಲಿರುವ 413 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14, 564 ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. 2019ರ ಜನವರಿಯಲ್ಲಿ ಯುಜಿಸಿ ಸುತ್ತೋಲೆಯು, ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಪ್ರತಿ ಬೋಧನಾ ಅವಧಿಗೆ ರೂಪಾಯಿ 1500 ಅಥವಾ ಮಾಸಿಕ50, 000 ವರೆಗೆ ವೇತನವನ್ನು ನಿಗದಿ ಮಾಡಬೇಕು ಎಂದು ನಿರ್ದೇಶನ ನೀಡಿತ್ತು. ಆದರೆ ಇಂದಿಗೂ ನಮ್ಮ ರಾಜ್ಯದಲ್ಲಿ ಅತಿಥಿ ಉಪನ್ಯಾಸಕರಿಗೆ ನೆಟ್, ಸೆಟ್, ಪಿಎಚ್ಡಿ, ಆಗಿರುವವರಿಗೆ ಮಾಸಿಕ 13, 000 ಸಾವಿರ ಉಳಿದವರಿಗೆ 11, 000 ಸಾವಿರ ವೇತನ ನೀಡಲಾಗುತ್ತದೆ. ಇನ್ನೊಂದೆಡೆ ಕಳೆದ ನಾಲ್ಕೈದು ತಿಂಗಳಿಂದ ಆ ಕೂಡಾ ವೇತನ ಪಾವತಿಯಾಗಿಲ್ಲ.

Contact Your\'s Advertisement; 9902492681

ಕೋವಿಡ್-19 ಲಾಕ್ಡೌನ್ ನಿಂದಾಗಿ ಅತಿಥಿ ಉಪನ್ಯಾಸಕರ ಸಮಸ್ಯೆಗಳು ತೀವ್ರವಾಗಿ ಉಲ್ಬಣಗೊಂಡಿವೆ.
ಇತ್ತೀಚಿಗೆ ಹಲವು ಅತಿಥಿ ಉಪನ್ಯಾಸಕರು ಆರ್ಥಿಕ ಮುಗ್ಗಟ್ಟಿನಿಂದಾಗಿ 16 ಜನ ಆತ್ಮಹತ್ಯೆ ಮಾಡಿಕೊಂಡರುವ ಪ್ರಕರಣ ಬೆಳಕಿಗೆ ಬಂದಿವೆ. ಇಂತಹ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಜೀವನದ ಜೊತೆ ಸರಕಾರ ಚೆಲ್ಲಾಟವಾಡುವುದನ್ನು ಬಿಟ್ಟು ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಯನ್ನು ಖಾತ್ರಿಪಡಿಸಬೇಕು ಮತ್ತು ಯಾವುದೇ ಕಾರಣಕ್ಕೂ ಸೇವೆಯಿಂದ ಕೈಬಿಡಬಾರದು ಹಾಗೂ ಬಾಕಿ ಇರುವ ವೇತನ ಈ ಕೂಡಲೇ ಬಿಡುಗಡೆಗೊಳಿಸಬೇಕು ಎಂಬ ಬೇಡಿಕೆಗಳಿಗಾಗಿ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಮುಖಂಡರಾದ ಭೀಮಾಶಂಕರ್ ಪಾಣೇಗಾಂವ್, ಜಗಪ್ಪ ತಳವಾರ್, ಅಣವೀರಪ್ಪ ಬೊಳೆವಾಡ್, ಈಶ್ವರ್ ಇ.ಕೆ., ಅಂಬಿಕಾ ಗುತ್ತೇದಾರ್ ಚಂದ್ರಶೇಖರ್ ಜಾಲವಾದಿ, ರಾಜಪ್ಪ ರಟಕಲ್, ಸುಭಾಸ್ ಚವಾಣ್, ಮಲ್ಲು ಧರಿಯಪುರ್ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here