ಬಿಸಿ ಬಿಸಿ ಸುದ್ದಿ

ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಕಲಿಸಿದ್ದು ನಾರಾಯಣ ಗುರು-ಶರಣಗೌಡ ಪಾಟೀಲ

ಶಹಾಬಾದ:ಹಿಂದುಳಿದ ಸಮಾಜ ಮುನ್ನೆಲೆಗೆ ಬರಬೇಕಾದರೆ ಅದು ವಿದ್ಯೆಯಿಂದ ಮಾತ್ರ ಸಾಧ್ಯ ಎಂಬ ಸಂದೇಶವನ್ನು ನೂರಾರು ವರ್ಷಗಳ ಹಿಂದೆ ಬ್ರಹ್ಮರ್ಷಿ ನಾರಾಯಣ ಗುರುಗಳು ನೀಡಿದ್ದಾರೆ ಎಂದು ಕಸಾಪ ಕಲಬುರಗಿ ಗ್ರಾಮೀಣ ಅಧ್ಯಕ್ಷ ಶರಣಗೌಡ ಪಾಟೀಲ ಹೇಳಿದರು.

ಅವರು ನಗರದ ಹಳೆಶಹಾಬಾದನಲ್ಲಿ ಆರ್ಯ ಈಡಿಗ ಸಮಾಜದ ವತಿಯಿಂದ ಬುಧವಾರ ಆಯೋಜಿಸಲಾದ ಬ್ರಹ್ಮರ್ಷಿ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಾರಾಯಣ ಗುರುಗಳು ಸಮಾಜದಲ್ಲಿನ ಅಸಮಾನತೆ ತೊಡೆದು ಹಾಕಲು ಶಿಕ್ಷಣದ ಮಹತ್ವ ತಿಳಿಸುವ ಕೆಲಸ ಮಾಡಿದ್ದರು.ಅವರ ಒಂದು ಮಾರ್ಗದರ್ಶನದಿಂದ ಇಂದು ಅನೇಕ ಸಣ್ಣ ಪುಟ್ಟ ಸಮಾಜ ಅಕ್ಷರ ಕಲಿತು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದು ಹೇಳಿದರು.

ಮಾಜಿ ನಗರಸಭೆಯ ಸದಸ್ಯ ಶ್ರೀಶೈಲ ಬೆಳಮಗಿ ಪೂಜೆ ಸಲ್ಲಿಸಿದರು.ಆರ್ಯ ಈಡಿಗ ಸಮಾಜದ ಅಧ್ಯಕ್ಷ ಭೀಮಯ್ಯ ಗುತ್ತೆದಾರ,ಆರ್ಯ ಈಡಿಗ ಸಮಾಜದ ಗೌರಾವಾಧ್ಯಕ್ಷ ಭಗವಾನ ಗುತ್ತೆದಾರ, ಉಪಾಧ್ಯಕ್ಷ ಅಶೋಕ ಗುತ್ತೆದಾರ,ಮಲ್ಲಿಕಾರ್ಜುನ ಪೂಜಾರಿ,ಶಿವಕುಮಾರ ನಾಟೀಕಾರ,ಶರಣಪ್ಪ ಕೊಡದೂರ,ಅಣವೀರದ್ಯಾಮಾ, ಬಾಲಾಜಿ ಗುತ್ತೆದಾರ,ವಾಜೀದ ಜಮಾದಾರ, ಸ್ನೇಹಲ್ ಜಾಯಿ, ಸುರೇಶ ಅಪಕಾರಿ, ಸಾಯಿಕುಮಾರ ಗುತ್ತೆದಾರ, ಕಾಶಿನಾಥ ಗುತ್ತೆದಾರ, ಶಂಕರ ಗುತ್ತೆದಾರ, ಮಲ್ಲಿಕಾರ್ಜುನ ಗುತ್ತೆದಾರ, ಮಲ್ಲಿಕಾಜರ್ುನ ಗುತ್ತೆದಾರ, ಯಂಕಯ್ಯ ಗುತ್ತೆದಾರ, ವಿಶ್ವರಾಧ್ಯ ಗುತ್ತೆದಾರ, ಸಾಬಯ್ಯ ಗುತ್ತೆದಾರ, ಉತ್ತಮ ಗುತ್ತೆದಾರ, ಭೀಮಾಶಂಕರ ಗುತ್ತೆದಾರ,ಮಲ್ಲಿಕಾಜರ್ುನ ಅಪಕಾರಿ ಇತರರು ಇದ್ದರು.

 

emedia line

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

31 mins ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

13 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

14 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

15 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

15 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

15 hours ago