ಖಾಸಗಿ ಬಸ್ ನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ

0
62

ಬೀದರ್: ಹುಮ್ನಾಬಾದ್ ನ ಧುಮನಸೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ ಖಾಸಗಿ ಬಸ್ ವೊಂದರಲ್ಲಿ ಆಕಸ್ಮಿಕವಾ ಬೆಂಕಿ ಅವಘಡ ಸಂಭಿಸಿರುವ ಘಟನೆ ಬುಧವಾರ ಸಂಜೆ 8-00 ಗಂಟೆಗೆ ನಡೆದಿದೆ.

ಬೀದರ್ ನಿಂದ ಬೆಂಗಳೂರಿಗೆ ಓಡುತ್ತಿದ್ದ ಜೈ ಭವಾನಿ ಎಂಬ ಖಾಸಗಿ ಬಸ್ ನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

Contact Your\'s Advertisement; 9902492681

ವಾಹನದ ಎಂಜಿನ್‌ನಿಂದ ಹೊಗೆ ಹೊರಹೊಮ್ಮುತ್ತಿರುವುದನ್ನು ಗಮನಿಸಿ ಬಸ್‌ನ ಚಾಲಕ ಪ್ರಯಾಣಿಕರನ್ನು ತಕ್ಷಣ ಸ್ಥಳಾಂತರಗೊಳಿಸಿ ಸಮಯ ಪ್ರಜ್ಞೆ ಮೆರೆದಿದ್ದಾನೆ.

20 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಈ ಬಸ್, ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸಿದರು. ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಧಾವಿಸಿ ದುರಂತ ನಡೆದ ಹೆದ್ದಾರಿಯಲ್ಲಿ ಕೆಲಹೊತ್ತು ಆಗಿರುವ ಟ್ರಾಫಿಕ್ ಜಾಮ್ ತೆರವುಗೊಳಿಸಿ, ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟರು ಎಂದು ತಿಳಿದುಬಂದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here