ವಿದ್ಯಾರ್ಥಿಗಳಿಗೆ “ನಿರ್ಭಯ ಸಾಧಕ” ಪ್ರಶಸ್ತಿ ಪ್ರದಾನ

ಕಲಬುರಗಿ: ವಿದ್ಯಾರ್ಥಿಗಳು ಕೇವಲ ಅಂಕ ಗಳಿಸದೆ ಅದರೊಂದಿಗೆ ಉತ್ತಮ ಜ್ಞಾನ ಸಂಪಾದನೆಯೊಂದಿಗೆ ಒಳ್ಳೆಯ ಸಮಾಜ ನಿರ್ಮಿಸುವುದು ಯುವಕರ ಜವಾಬ್ದಾರಿಯಾಗಿದೆ ಎಂದು ಪಾಳಾದ ಶ್ರೀ ಷ.ಬ್ರ. ಡಾ. ಗುರುಮೂರ್ತಿ ಶಿವಾಚಾರ್ಯರು ಹೇಳಿದರು.

ಪಾಳಾದ ಕಟ್ಟಿಮನಿ ಹಿರೇಮಠದಲ್ಲಿ ಇಂದು ಅಖಿಲ ಭಾರತ ಯುವಜನ ಒಕ್ಕೂಟ ಹಾಗೂ ಸ್ನೇಹ ಸಂಗಮ ವಿವಿದೊದ್ದೇಶ ಸೇವಾ ಸಂಘದ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ “ನಿರ್ಭಯ ಸಾಧಕ” ಪ್ರಶಸ್ತಿ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ ಇಂದಿನ ತಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳು ಅಂಕ ಹೆಚ್ಚು ಪಡೆದು ನೌಕರಿಗಿಟ್ಟಿಸಿ ಸುಖ ಜೀವನ ನಡೆಸುತ್ತಿದ್ದಾರೆ. ಆದರೆ ಉತ್ತಮ ಸಂಸ್ಕಾರದ ಕೊರತೆಯಿಂದ ಮಾನವೀಯ ಮೌಲ್ಯಗಳನ್ನು ಮರೆತು ಬದುಕುತ್ತಿದ್ದಾನೆ ಎಂದು ವಿಷಾದ ವ್ಯಕ್ತಪಡಿಸುತ್ತಾ ಹೆಚ್ಚು ಅಂಕದೊಂದಿಗೆ ಭಾವಿ ಭವಿಷ್ಯ ರೂಪಿಸಿಕೊಂಡು ರಾಷ್ಟ್ರದ ಉತ್ತಮ ನಾಗರಿಕರಾಗಲಿ ಎಂದು ಹಾರೈಸಿದರು.

ಪ್ರಶಸ್ತಿ ಪ್ರದಾನ ಮಾಡಿದ ಕಲಬುರಗಿ ಜಿಲ್ಲಾ ಪಂಚಾಯತ ಸದಸ್ಯರಾದ ಅರವಿಂದ ಚವ್ಹಾಣ ಮಾತನಾಡುತ್ತಾ ಇಂದಿನ ದಿನಮಾನಗಳಲ್ಲಿ ಪ್ರತಿಫಲವಿಟ್ಟುಕೊಂಡು ಸಮಾಜ ಸೇವೆ ಮಾಡುವ ಜನರ ಮದ್ಯದಲ್ಲಿ ಯಾವುದೇ ಪ್ರತಿಫಲ ಅಪೇಕ್ಷಿಸದೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿ ಮಕ್ಕಳ ಭವಿಷ್ಯ ನೀಡುವ ಕಾರ್ಯ ಸ್ನೇಹ ಸಂಗಮದ ಕಾರ್ಯ ಶ್ಲಾಘನೀಯ. ಮಾತುಗಳು ಮುಳ್ಳಿನಂತಿದ್ದರು ಅವು ಮತ್ತೊಬ್ಬನನ್ನು ಎಚ್ಚರಿಸಿ ಸರಿ ದಾರಿಗೆ ತರುವ ಗಡಿಯಾರದ ಮುಳ್ಳಾಗಬೇಕೆ ವಿನಃ ಮನಸ್ಸನ್ನು ಚುಚ್ಚುವ ಮುಳ್ಳಾಗಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸಂಘದ ಅಧ್ಯಕ್ಷರಾದ ನ್ಯಾಯವಾದಿ ಹಣಮಂತರಾಯ ಅಟ್ಟೂರ ಮಾತನಾಡುತ್ತಾ ಪ್ರತಿವರ್ಷ ನಗರದಲ್ಲಿ ಮಾಡುವ ಸಮಾರಂಭ ಕೊರೊನಾ ಸೋಂಕಿನಿಂದ ಹಳ್ಳಿ-ಹಳ್ಳಿಗೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸರಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪಾಳಾದ ಸರಕಾರಿ ಪ್ರೌಢಶಾಲೆ ಮುಖ್ಯಗುರುಗಳಾದ ಮಾರುತಿ ಹುಜರತಿ, ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ನಾಗಲಾಂಬಿಕಾ ಮಾತನಾಡಿದರು.

ವೇದಿಕೆಯ ಮೇಲೆ ಸಂತೋಷ ಅಡೆ, ರಘುನಂದನ ಕುಲಕರ್ಣಿ, ಸಂಗಮೇಶ ಸಿ. ಪಾಟೀಲ ಇದ್ದರು. ಎಸ್.ಎಸ್.ಎಲ್.ಸಿ.ಯಲ್ಲಿ ಹೆಚ್ಚು ಅಂಕ ಪಡೆದ ಕೀರ್ತಿ ಶಿವಪುತ್ರ, ಪೂಜಾ, ಅಂಕಿತಾ, ಪವಿತ್ರಾ, ಕೀರ್ತಿ, ಈಶ್ವರ ಮಾರುತಿ ಹಾಗೂ ಪಿ.ಯು.ಸಿ.ಯಲ್ಲಿ ಹೆಚ್ಚು ಅಂಕ ಪಡೆದ ಪೂಜಾ ಜಿ. ಕಲಶೆಟ್ಟಿ, ಅಂಕಿತಾ ಜಿ. ಪೊ. ಪಾಟೀಲ, ಶ್ವೇತಾ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಶಿವರುದ್ರ ಕರಿಕಲ, ಸಾಯಬಣ್ಣಾ ಬೆಳಮ್, ಮಲಕಾರಿ ಪೂಜಾರಿ, ರಾಜಶೇಖರ ಪಾಟೀಲ, ಕಲ್ಯಾಣರಾವ ಮುರುಡ, ರಾಜು ಹೆಬ್ಬಾಳ, ಮಧುಸೂಧನ ಕುಲಕರ್ಣಿ, ಕಿರಣ ಕುಲಕರ್ಣಿ, ಯಲ್ಲಾಲಿಂಗ ಪೂಜಾರಿ, ಸಂಗಣಗೌಡ ಸರಡಗಿ, ಶಿಕ್ಷಕರಾದ ಮಲ್ಲಮ್ಮ ಎಸ್. ಹಿರೇಮಠ, ಗೀತಾ ಭರಣಿ, ಮಲ್ಲಿಕಾರ್ಜುನ ಭಜಂತ್ರಿ, ರಾಜಶೇಖರ ದಬಾಡೆ, ವಿದ್ಯಾವತಿ, ಕಾವೇರಿ ಕಾಂಬಳೆ, ಸರಿತಾ ಯುವಮುಖಂಡರಾದ ಸಂತೋಷ ಸಾಹು, ಬಾಪುಗೌಡ, ಮಾಲಿಪಾಟೀಲ, ಪ್ರವೀಣ ಆಡೆ, ಶಾಂತಪ್ಪಾ ಬನ್ನೂರ, ನಾನಾಗೌಡ ಪೊಲೀಸ್ ಪಾಟೀಲ, ಕರಬಸಯ್ಯ ಮಠಪತಿ ಇತರರು ಭಾಗವಹಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

11 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

13 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

14 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

14 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

14 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

14 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420