ರಾಯಚೂರು: ಇಡೀ ದೇಶವು ತೀವ್ರ ಆರೋಗ್ಯ ಮತ್ತು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಇತ್ತೀಚಿನ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ, ದೇಶಾದ್ಯಂತ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶಕ್ಕಾಗಿ ಜೆಇಇ-ನೀಟ್ ಪರೀಕ್ಷೆಗಳನ್ನು ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು SFI ರಾಯಚೂರು ಜಿಲ್ಲಾ ಸಮಿತಿಯು ಬಲವಾಗಿ ವಿರೋಧಿಸುತ್ತೇದೆ.
ಸೋಂಕಿತರ ಸಂಖ್ಯೆ ಮತ್ತು ಸೋಂಕಿನಿಂದ ಸಾಯುವವರ ಸಂಖ್ಯೆಯು ಪ್ರತಿದಿನ ಹೆಚ್ಚಾಗುತ್ತಿರುವುದರಿಂದ, ಇದು ಸರ್ಕಾರದ ಅತ್ಯಂತ ಸೂಕ್ಷ್ಮವಲ್ಲದ ಕ್ರಮವಾಗಿದ್ದು, ವಿದ್ಯಾರ್ಥಿಗಳ ಆರೋಗ್ಯವನ್ನು ಆಳುವ ಸರ್ಕಾರಗಳು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿವೆ. ಈ ಬಿಜೆಪಿ ಸರಕಾರದ ಈ ನಿರಂಕುಶಾಧಿಕಾರಿ ಕ್ರಮವನ್ನು ಖಂಡಿಸಿ ದೇಶಾದಾದ್ಯಂತ ವಿದ್ಯಾರ್ಥಿಗಳು ಖಂಡನೆ ವ್ಯಕ್ತಪಡಿಸುತ್ತಿದ್ದಾರೆ.
ಈ ವಿದ್ಯಾರ್ಥಿ ವಿರೋಧಿ ಸರ್ಕಾರ ಮತ್ತು ಅದರ ನೀತಿಗಳ ವಿರುದ್ಧ ವಿದ್ಯಾರ್ಥಿ, ವಿದ್ಯಾರ್ಥಿ ಸಂಘಟನೆ ಗಳು ಮತ್ತು ಪಾಲಕ – ಪೋಷಕರು ಒಂದಾಗಿ ಹೋರಾಟ ವನ್ನು ಮಾಡುತ್ತಿದ್ದಾರೆ. ಹಾಗೆಯೇ ಈ ಸಮಯದಲ್ಲಿ ಪರೀಕ್ಷೆಗಳನ್ನು ನಡೆಸುವುದು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ, ಈಗಾಗಲೇ ಸರ್ಕಾರದ ಈ ನಿರ್ಧಾರವನ್ನು ಪುನರ್ವಿಮರ್ಶಿಸುವಂತೆ ಸುಪ್ರೀಂಕೋರ್ಟ್ ಮುಂದೆ ಮೇಲ್ಮನವಿ ಸಲ್ಲಿಸಿವೆ.
ಕೇಂದ್ರ ಸರ್ಕಾರ ಕೂಡಲೇ ಪರೀಕ್ಷೆ ಯನ್ನು ರದ್ದು ಗೊಳಿಸಿ ವಿದ್ಯಾರ್ಥಿಗಳ ಹಿತ ರಕ್ಷಣೆಗೆ ಮುಂದಾಗಬೇಕೇಂದು SFI ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ, ಜಿಲ್ಲಾಧ್ಯಕ್ಷರಾದ ರಮೇಶ ವೀರಾಪುರ, ಜಿಲ್ಲಾ ಕಾರ್ಯದರ್ಶಿ ಲಿಂಗರಾಜ ಕಂದಗಲ್ ಜಿಲ್ಲಾ ಸಮಿತಿಯ ಪರವಾಗಿ ಜಂಟಿ ಪತ್ರಿಕಾ ಹೇಳಿಕೆ ನೀಡುವ ಮೂಲಕ ಒತ್ತಾಯಿಸಿದ್ದಾರೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…