ಕಲಬುರಗಿ: ಅಫಜಲಪುರ ತಾಲ್ಲೂಕಿನ ಸಂಗಾಪೂರ ಗ್ರಾಮದಲ್ಲಿ ಇತ್ತೀಚೆಗೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ದೇವಲಗಾಣಗಾಪುರ ಪೊಲೀಸ್ ರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೆಕ್ಕರಸಾವಳಗಿ ಸಂಗಾಪೂರ ಗ್ರಾಮದ ಪ್ರಭು ಲಕ್ಷ್ಮಣ ಕಾಂಬಳೆ, ಚಾಂದ ಹುಸೇನಸಾಬ ಜಮಾದಾರ ಮತ್ತು ಮಹ್ಮದ್ ಇಸ್ಮಾಯಿಲಸಾಬ ಹುಂಡೇಕರ ಎಂಬುವವರನ್ನು ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದಾರೆ.
ಆ.30 ರಸ್ತೆಯಲ್ಲಿ ಬಾಬು ಕೋಬಾಳ ಬೈಕ್ ಮೇಲೆ ಹೋಗುತ್ತಿದ್ದಾಗ ಕೊಡಲಿಯಿಂದ ಕುತ್ತಿಗೆಗೆ ಹೊಡೆದು ರುಂಡ ದೇಹದಿಂದ ಬೇರ್ಪಡಿಸಿ ಕೊಲೆ ಮಾಡಲಾಗಿತ್ತು. ಈ ಭೀಕರ ಕೊಲೆಯಿಂದ ಜಿಲ್ಲೆಯ ಜನರು ಬೆಚ್ಚಿಬಿದ್ದಿದ್ದರು.
ಆಳಂದ ಡಿ.ಎಸ್.ಪಿ ಮಲ್ಲಿಕಾರ್ಜುನ ಸಾಲಿ ಅವರ ಮಾರ್ಗದರ್ಶನದ ಅಫಜಲಪುರ ಸಿಪಿಐ ಮಹಾದೇವ ಪಂಚಮುಖಿ, ಪಿಎಸ್ಐ ಸಂತೋಷ ತಟ್ಟೇಪಳ್ಳಿ, ರೇವೂರ ಪಿಎಸ್ಐ ಸುರೇಶ ಬಾಬು, ಎ.ಎಸ್.ಐ.ಗಳಾದ ರಾಜಶೇಖರ, ಕಮಲು ರಾಠೋಡ್, ಸಿಬ್ಬಂದಿಗಳಾದ ತುಳಜಪ್ಪ, ಕುಶಣ್ಣ, ಪ್ರಭು, ಶಿವಯ್ಯ, ಪಂಚಾಕ್ಷರಿ, ಬಾದಷ್ಯಾ, ಯಲ್ಲಪ್ಪ ಮತ್ತು ಭೀಮಾಶಂಕರ ಅವರನ್ನೊಳಗಂಡ ತಂಡ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಮೂವರು ಸೇರಿ ಈ ಕೊಲೆ ಮಾಡಿ ಪರಾರಿಯಾಗಿದ್ದರು ಎಂದು ತಿಳಿದುಬಂದಿದೆ.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…