ಬೆಂಗಳೂರು: ಕಲಬುರಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ನಿರುದ್ಯೋಗಿ ಯುವಕ/ ಯುವತಿಯರಿಗಾಗಿ ಉದ್ಯಮಶೀಲತೆ ಯೋಜನೆಯಡಿಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮಗಳ ಮೂಲಕ, ರೂ 200 ಕೋಟಿ ವೆಚ್ಚದಲ್ಲಿ 4500 ವಾಹನಗಳನ್ನು ಒದಗಿಸಲು “ಐರಾವತ” ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ.
ಈ ಯೋಜನೆಯಡಿಯಲ್ಲಿ ಸೌಲಭ್ಯ ಬಯಸಿ ಆಯ್ಕೆಯಾಗುವ ಪಜಾ ಹಾಗೂ ಪಪಂದ ಅಭ್ಯರ್ಥಿಗಳಿಗೆ ವಾಹನದ ಒಟ್ಟು ವೆಚ್ಚದಲ್ಲಿ ರೂ 5 ಲಕ್ಷಗಳನ್ನು ನಿಗಮಗಳ ವತಿಯಿಂದ ಸಹಾಯಧನವನ್ನಾಗಿ ಕೊಡಲಾಗುತ್ತದೆ.
ಸಮಾಜ ಕಲ್ಯಾಣ ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ‘ಐರಾವತ’ ಯೋಜನೆಯಡಿ ಮುಖ್ಯಮಂತ್ರಿ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಇಂದು ಮೇ 30 (ಗುರುವಾರ) ನಡೆದ ಕಾರ್ಯಕ್ರಮದಲ್ಲಿ 209 ಮಂದಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಾಹನಗಳನ್ನು ವಿತರಿಸಿದರು.
ಐರಾವತ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 200 ಕೋಟಿ ರೂ.ವೆಚ್ಚದಲ್ಲಿ 4500 ಮಂದಿಗೆ ವಾಹನಗಳನ್ನು ಓಲಾ/ಊಬರ್ ಸಂಸ್ಥೆಗಳ ಸಹಯೋಗದೊಂದಿಗೆ ನೀಡಲಾಗುತ್ತಿದೆ.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…
View Comments
ಕಲಬುರಗಿಯಲ್ಲಿ ಯಾವಾಗ ವಿತರಿಸಲಾಗುತ್ತದೆ ?