ಡಾ.ಈಶ್ವರಯ್ಯ ಮಠ ನಮಗೆ ಮಾದರಿ: ಶಾಂತಾ ಭೀಮಸೇನರಾವ

0
115

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಸಾಹಿತಿ, ವಾಗ್ಮಿ, ಸಂಶೋಧಕ ಮತ್ತು ಒಬ್ಬ ಒಳ್ಳೆಯ ಶಿಕ್ಷಕನನ್ನು ಕಳೆದು ಕೊಂಡು ಈ ಭಾಗ ಬಡವಾಗಿದೆ ಎಂದು ಶಾಂತಾ ಭೀಮಸೇನರಾವ ಅವರು ನುಡಿದರು.

ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ. ಎಸ್. ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಲಿಂ. ಡಾ. ಈಶ್ವರಯ್ಯ ಮಠ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Contact Your\'s Advertisement; 9902492681

ಡಾ. ಈಶ್ವರಯ್ಯ ಮಠ ಅವರು ಸಾಹಿತ್ಯದಲ್ಲಿ ಕ್ಷೇತ್ರದಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಸದಾ ಹಸನ್ಮುಖಿಯಾಗಿ ಜೀವನ ನಡೆಸಿ ನಮಗೆಲ್ಲ ಮಾದರಿಯಾಗಿದ್ದರು ಎಂದು ಸ್ಮರಿಸಿಕೊಂಡರು.

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ವಿಶೇಷಾಧಿಕಾರಿ ಡಾ. ಸಿ. ಸಿ.ಪಾಟೀಲ ಶಿಕ್ಷಕರ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು.

ಪ್ರಾಚಾರ್ಯರಾದ ಡಾ. ಎಸ್. ಎ. ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ. ಪ್ರೇಮಚಂದ ಚವ್ಹಾಣ್ ಕಾರ್ಯಕ್ರಮ ನಿರ್ವಹಿಸಿದರು, ಡಾ. ರಾಜಶೇಖರ್ ಬೀರನಳ್ಳಿ ಸ್ವಾಗತಿಸಿದರು, ಡಾ. ಪ್ರಾಣೇಶ್ ಎಸ್. ವಂದಿಸಿದರು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here