ಕಲಬುರಗಿ: ನಗರದ ಝುಬೇರ ಕಾಲೋನಿಯಲ್ಲಿ ಬೀದಿನಾಯಿಗಳ ಹಾವಳಿಯಿಂದ ಮೂವರು ಮಕ್ಕಳಿಗೆ ಗಂಭೀರ ಗಾಯ ಗೊಂಡಿರುವ ಘಟನೆ ಸಂಭವಿಸಿದೆ.
ಮಹ್ಮದ್ ಫೈಸಲ್ (4), ಮಹ್ಮದ್ ಝಾಹಿದ್ (5) ಹಾಗೂ ಸಮಿರಾ (4) ಬಿದಿನಾಯಿಗಳ ಹಾವಳಿಗೆ ತುತಾದ ಮಕ್ಕಳು. ಮಕ್ಕಳೆಲ್ಲರು ಕಲಬುರಗಿ ನಗರದ ವಾರ್ಡ್ 2ರ ಝುಬೇರ ಕಾಲೋನಿಯಾ ನಿವಾಸಿಗಳಾಗಿದ್ದು, ಬೀದಿನಾಯಿಗಳು ಹಾವಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಮಕ್ಕಳಿಗೆ ಪೋಷಕರು ನಗರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಬಡಾವಣೆಯಲ್ಲಿ ಮಕ್ಕಳೇಲ್ಲರು ಆಟಾ ಆಡುತಿದ್ದಾಗ, ಬಡಾವಣೆಯಲ್ಲಿರುವ ಬೀದಿನಾಯಿ ಮಕ್ಕಳ ಮೇಲೆ ದಾಳಿ ನಡೆಸಿದವು, ಈ ಸಂದರ್ಭದಲ್ಲಿ. ಘಟನಾ ಸ್ಥಳದಲ್ಲಿ ಸಾರ್ವಜನಿಕರು ನಾಯಿಗಳನ್ನು ಹೊಡೆದೊಡಿಸಿ ಮಕ್ಕಳ ಜೀವ ರಕ್ಷಿಸಿದ್ದಾರೆ ಎಂದು ಪ್ರತ್ಯೇಕ್ಷ ದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಮಕ್ಕಳ ಮೈ ಮೇಲೆ ಗಂಭೀರವಾಗಿ ಗಾಯಗಳಾಗಿದ್ದು, ಗಾಯಗೊಂಡ ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೋಷಕರು ತಿಳಸಿದ್ದಾರೆ.
ಘಟನೆ ಕುರಿತು ಆಕ್ರೋಶ ವ್ಯಕ್ತಪಡಿಸಿದ ಪೋಷಕರು ಮಹಾನಗರ ಪಾಲಿಕೆಯ ನಿರ್ಲಕ್ಷ್ಯದಿಂದ ಮಕ್ಕಳ ಜೀವ ಅಪಾಯಕ್ಕೆ ಸಿಲುಕಿದೆ ಎಂದು ಆರೋಪಿಸಿ ಕಲಬುರಗಿ ಮಹಾನಗರ ಪಾಲಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತಕ್ಷಣ ಬೀದಿನಾಯಿಗಳನ್ನು ಹಿಡಿದು ರಕ್ಷಣೆಗೆ ಪಾಲಿಕೆ ಮುಂದಾಗಬೇಕು ಮತ್ತು ಗಾಯಗೊಂಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಲು ಪಾಲಿಕೆ ಮುಂದಾಗಬೇಕೆಂದು ಸಾರ್ವಜನಿಕರು ಹಾಗೂ ಪೋಷಕರು ಆಗ್ರಹಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…