ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಕ್ರೀಡಾ ಪಟುಗಳಿಗೆ ಸ್ಪೂರ್ತಿ ನೀಡಲೆಂದು ಈ ಬಾಗದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯವರು ಯು.ಜಿ.ಸಿ. ಅನುದಾನದಲ್ಲಿ ನಿರ್ಮಾಣ ಮಾಡಿರುವ ಒಳಾಂಗಣ ಕ್ರೀಡಾಂಗಣವೆ ಸಾಕ್ಷೀ ಎಂದು ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ ರೇವೂರ ರವರು ನುಡಿದರು.
ನಗರದ ಪ್ರತಿಷ್ಠಿತ ಎಂ. ಎಸ್. ಇರಾಣಿ ಪದವಿ ಕಾಲೇಜಿನಲ್ಲಿ ನಿರ್ಮಾಣವಾದ ಒಳಾಂಗಣ ಕ್ರೀಡಾಂಗಣವನ್ನು ಉದ್ಘಾಟಿಸಿ ಮಾತನಾಡುತ್ತಾ ಈ ರೀತಿಯ ಸುಸಜ್ಜಿತ ಒಳಾಂಗಣ ಕ್ರೀಡಾಂಗಣ ಈ ಭಾಗದ ಅದರಲ್ಲೂ ನಗರದ ಮಹಾವಿದ್ಯಾಲಯದಲ್ಲಿ ನಿರ್ಮಾಣವಾಗಿರುವುದು ಈ ಭಾಗದ ಕ್ರೀಡಾಪಟುಗಳಿಗೆ ಹೆಚ್ಚಿನ ಅವಕಾಶಗಳು ದೊರೆಯಲಿವೆ ಎಂದು ನುಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವತಿಯಿಂದ ನಗರದಲ್ಲಿ ಸುಮಾರು ೫೦ ಎಕರೆ ಪ್ರದೇಶದಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸಂಕೀರಣವನ್ನು ನಿರ್ಮಾಣ ಮಾಡುವುದಾಗಿ ರೇವೂರ ಹೇಳಿದ್ದರು.
ಬಡ ಮಕ್ಕಳ ಭವಿಷ್ಯ ನಿರ್ಮಾಣ ಮಾಡಲೆಂದೆ ಹುಟ್ಟಿಕೊಂಡಿರುವ ಶಿಕ್ಷಣ ಸಂಸ್ಥೆ ಎಂದರೆ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆ ಎಂದು ಸಂಸ್ಥೆಯ ಅಧ್ಯಕ್ಷ ಡಾ. ಭೀಮಾಶಂಕರ ಸಿ. ಬಿಲಗುಂದಿಯವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಡಾ. ಶಿವಾನಂದ ದೇವರಮನಿ, ಕಾರ್ಯದರ್ಶಿ ನಿತಿನ ಬಿ. ಜವಳಿಯವರು, ಜಂಟಿ ಕಾರ್ಯದಶಿ ಗಂಗಾಧರ ಎಲಿಯವರು, ಸಂಯೋಜಕರಾದ ವಿಜಯಕುಮಾರ ದೇಶಮುಖಯವರು, ಆಡಳಿತ ಮಂಡಳಿ ಸದಸ್ಯರಾದ ಡಾ. ಸಂಪತಕುಮಾರ ಲೋಯಾ, ಉದಯಕುಮಾರ ಚಿಂಚೋಳಿ, ಸತೀಶಚಂದ್ರ ಹಡಗಲಿಮಠ, ಸಂಜಯ ಮಾಕಲ್, ಕಾಲೇಜಿನ ಪ್ರಾಚಾರ್ಯರಾದ ಡಾ. ಎಸ್. ಎ. ಪಾಟೀಲ ರವರು ಸ್ವಾಗತ ಮತ್ತು ಪ್ರಾಸ್ತಾವಿಕವಾಗಿ ಮಾತನಾಡಿದ್ದರು. ಶಿವಲೀಲಾ ಧೋತ್ರೆಯವರು ನಿರ್ವಹಿಸಿದ್ದರು. ಡಾ. ರಾಜಶೇಖರ ಬೀರನಳ್ಳಿಯವರು ವಂದಿಸಿದ್ದರು. ಕಾಲೇಜಿನ ಐ.ಕ್ಯೂ.ಎ.ಸಿ. ಸಂಯೋಜಕರಾದ ಡಾ. ಪ್ರೇಮಚಂದ ಚವ್ಹಾಣ, ಡಾ. ಪ್ರಾಣೇಶ ಎಸ್. ಶಂಕ್ರಪ್ಪ ಕಲಬುರಗಿ. ರೋಹಿಣಿಕುಮಾರ ಹಿಳ್ಳಿ, ಅನೇಕ ಬೋಧಕ-ಬೋಧಕೇತ್ತರ ಸಿಬ್ಬಂಧಿವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…