ಪತ್ರಕರ್ತರನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿ ಪರಿಹಾರ ನೀಡಿ: ರಾಜು ಕುಂಬಾರ

ಸುರಪುರ: ಇಂದು ರಾಜ್ಯದಲ್ಲಿ ಅನೇಕ ಜನ ವಿವಿಧ ಮಾದ್ಯಮಗಳ ವರದಿಗಾರರು ಕೊರೊನಾ ವರದಿಗಾಗಿ ತೆರಳಿದ ಸಂದರ್ಭದಲ್ಲಿ ಸೊಂಕಿಗೆ ಒಳಗಾಗಿ ಸಾವನ್ನಪ್ಪಿದ್ದಾರೆ. ಅಂತಹ ಎಲ್ಲಾ ಮಾದ್ಯಮಗಳ ಪ್ರತಿನಿಧಿಗಳಿಗೆ ಕೊರೊನಾ ವಾರಿಯರ್ಸ್ ಎಂದು ಘೋಷಿಸಿ ಪರಿಹಾರ ನೀಡುವಂತೆ ಕರ್ನಾಟಕ ಜರ್ನಲಿಸ್ಟ್ಸ್ ಯೂನಿಂiiನ್ ತಾಲೂಕು ಅಧ್ಯಕ್ಷ ರಾಜು ಕುಂಬಾರ ಸರಕಾರಕ್ಕೆ ಆಗ್ರಹಿಸಿದರು.

ನಗರದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮಾತನಾಡಿ,ಸರಕಾರ ಅಂಗನವಾಡಿ ಆರೋಗ್ಯ ಸ್ವಚ್ಛತಾ ಕರ್ಮಿಗಳು ಹಾಗು ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿ ಪರಿಹಾರ ಧನವನ್ನು ಘೋಷಣೆ ಮಾಡಿದೆ.ಆದರೆ ಪತ್ರಕರ್ತರು ಹಗಲಿರಳು ಜೀವದ ಹಂಗು ತೊರೆದು ಕೊರೊನಾ ಸೊಂಕಿತರ ಕುರಿತು ಹಾಗು ಜನ ಜಾಗೃತಿಗಾಗಿ ಕೆಲಸ ಮಾಡುತ್ತಾರೆ.

ಅಂತಹ ಮಾದ್ಯಮದ ವರದಿಗಾರರನ್ನೂ ಸರಕಾರ ಕೊರೊನಾ ವಾರಿಯರ್ಸ್ ಎಂದು ಘೋಷಣೆ ಮಾಡಬೇಕಿರುವುದು ಸರಕಾರದ ಕರ್ತವ್ಯವಾಗಿದೆ.ಆದ್ದರಿಂದ ಸರಕಾರ ಮಾದ್ಯಮದ ಪ್ರತಿನಿಧಿಗಳಿಗೂ ವಾರಿಯರ್ಸ್‌ಗೆ ನೀಡುವಂತೆ ಪರಿಹಾರ ಧನ ನೀಡಬೇಕು.ಕಳೆದ ಎರಡು ದಶಕಗಳಿಂದ ವಿವಿಧ ಪತ್ರಿಕೆಗಳಲ್ಲಿ ವರದಿಗಾರನಾಗಿ ಸೇವೆ ಸಲ್ಲಿಸಿದ ಸೋಮಶೇಖರ ನರಬೋಳಿ ಎಂಬುವ ವರದಿಗಾರರು ಕಳೆದ ಕೆಲ ದಿನಗಳ ಹಿಂದೆ ಎದೆ ನೋವಿನಿಂದ ನಿಧನರಾಗಿದ್ದು,ಕಲಬುರ್ಗಿ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಅವರನ್ನು ಕೋವಿಡ್-೧೯ ನಿಯಮದಂತೆ ಶವ ಸಂಸ್ಕಾರ ಮಾಡಿದ್ದಾರೆ.

ಮೃತ ವರಿದಗಾರ ಸೋಮಶೇಖರ ನರಬೋಳಿಯವರನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿ ಸರಕಾರ ಪರಿಹಾರ ಧನ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಕೆಜೆಯು ಒತ್ತಾಯಿಸುತ್ತದೆ ಜೊತೆಗೆ ಸ್ಥಳಿಯ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅವರು ಕೂಡ ಸರಕಾರದ ಮೇಲೆ ಒತ್ತಡ ಹಾಕಿ ಪರಿಹಾರ ಕೊಡಿಸಬೇಕೆಂದು ಮನವಿ ಮಾಡಿದರು.

ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರ್ ಸೂಫಿಯಾ ಸುಲ್ತಾನ ಅವರ ಮೂಲಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆಜೆಯು ಉಪಾಧ್ಯಕ್ಷ ಮಲ್ಲು ಗುಳಗಿ,ಪ್ರಧಾನ ಕಾರ್ಯದರ್ಶಿ ಪರಶುರಾಮ ಮಲ್ಲಿಬಾವಿ,ಖಜಾಂಚಿ ಮಹಾದೇವಪ್ಪ ಬೊಮ್ಮನಹಳ್ಳಿ ಮುರಳಿಧರ ಅಂಬುರೆ ಕಲೀಂ ಫರೀದಿ ಪುರೊಷೋತ್ತಮ ದೇವತ್ಕಲ್ ರಾಘವೇಂದ್ರ ಮಾಸ್ತರ್ ಮಾಳಪ್ಪ ಕಿರದಳ್ಳಿ ಇತರರಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420