ಹಣ ಲ್ಯಾಪ್ಸ್‍ವಾದಲ್ಲಿ ಅಧಿಕಾರಿಗಳೇ ನೇರವಾಗಿ ಹೊಣೆ: ಸುವರ್ಣಾ ಹಣಮಂತರಾಯ ಮಲಾಜಿ

0
70

ಕಲಬುರಗಿ: ಪ್ರಸಕ್ತ ಸಾಲಿಗೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಇಲಾಖೆಗಳಿಗೆ ಹಂಚಿಕೆ ಮಾಡಲಾದ ಅನುದಾನಕ್ಕೆ ಕ್ರಿಯಾ ಯೋಜನೆ ರೂಪಿಸಿ ವರ್ಷಾಂತ್ಯದೊಳಗೆ ಅನುಷ್ಠಾನ ಮಾಡುವ ಮೂಲಕ ಆರ್ಥಿಕ ಸಾಧನೆ ಮಾಡಬೇಕು. ಅನುದಾನ ಖರ್ಚಾಗದೆ ಲ್ಯಾಪ್ಸ್‍ವಾದಲ್ಲಿ ಸಂಬಂಧಿಸಿದ ಅಧಿಕಾರಗಳನ್ನೇ ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಹೇಳಿದರು.

ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಣಕಾಸು, ಲೆಕ್ಕಪರಿಶೋಧನೆ ಹಾಗೂ ಯೋಜನಾ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Contact Your\'s Advertisement; 9902492681

ಕ್ರಿಯಾ ಯೋಜನೆಯನ್ವಯ ಕಾಮಗಾರಿಗಳಿಗೆ ನಿಗಧಿತ ಅನುದಾನ ಖರ್ಚು ಮಾಡದೆ ಹಾಗೇ ಇಟ್ಟುಕೊಂಡಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸರ್ಕಾರಕ್ಕೆ ವರದಿ ಮಾಡಲಾಗುವುದು. ಅನುದಾನ ಬಳಕೆಯಲ್ಲಿ ಕರ್ತವ್ಯ ನಿರ್ಲಕ್ಷತನ ಯಾವುದೇ ಕಾರಣಕ್ಕು ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಅನುದಾನ ಕುರಿತು ಯಾವುದೇ ಸಮಸ್ಯೆಗಳಿದಲ್ಲಿ ಅಧಿಕಾರಿಗಳು ನೇರವಾಗಿ ನನ್ನನ್ನು ಭೇಟಿಯಾಗಿ ಚರ್ಚಿಸಬೇಕು. ಕೊರೋನಾ ಸಂಕಷ್ಠದ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ಕರ್ತವ್ಯವನ್ನು ಜಿ.ಪಂ. ಅಧ್ಯಕ್ಷರು ಶ್ಲಾಘಿಸಿದರು.
ಸಭೆಯ ಆರಂಭದಲ್ಲಿ ಗೌರವಾನ್ವಿತ ಮಾಜಿ ರಾಷ್ಟ್ರಪತಿ ದಿ|| ಪ್ರಣಬ್ ಮುಖರ್ಜಿ ಅವರ ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ ಒಂದು ನಿಮಿಷ ಮೌನಾಚರಣೆ ಮಾಡಿ ಮೃತರಿಗೆ ಗೌರವ ಸಲ್ಲಿಸಲಾಯಿತು.

ಸಭೆಯಲ್ಲಿ ಸಮಿತಿ ಸದಸ್ಯರುಗಳಾದ ಶಿವರಾಜ ಪಾಟೀಲ, ಶಿವಾನಂದ ಪಾಟೀಲ, ಶಿವಶರಣಪ್ಪ ಆರ್. ಶಂಕರ, ದೇವಕ್ಕಿ ಚನ್ನಮಲ್ಲಯ್ಯ ಹಿರೇಮಠ, ಕಲಾವತಿ ಮಲ್ಲ್ಲಣ್ಣ ನಾಗೂರೆ, ಸದಸ್ಯ ಕಾರ್ಯದರ್ಶಿ ಕಿಶೋರಕುಮಾರ ದುಬೆ ಸೇರಿದಂತೆ ಜಿಲ್ಲಾ ಪಂಚಾಯತ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here