ಸುರಪುರ: ಕಂದಾಯ ಇಲಾಖೆಗಳ ಕಚೇರಿಗಳಲ್ಲಿನ ಸರ್ವರ್ ಸಮಸ್ಯೆಯ ನೆಪ ಹೇಳಿ ನಿತ್ಯವು ರೈತರಿಗೆ ಪಟ್ಟಣಕ್ಕೆ ಅಲೆಸಲಾಗುತ್ತಿದೆ.ಇದರಿಂದ ರೈತರು ಬೇಸತ್ತು ಹೋಗಿದ್ದಾರೆ.ಆದ್ದರಿಂದ ಕೂಡಲೆ ಸರಕಾರ ಕಂದಾಯ ಇಲಾಖೆಯಲ್ಲಿನ ತಾಂತ್ರಿಕ ದೋಷ ನಿವಾರಣೆಗೆ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಎಸ್ಟಿ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ ದೊರೆ ಆಲ್ದಾಳ ಸರಕಾರಕ್ಕೆ ಆಗ್ರಹಿಸಿದ್ದಾರೆ.
ಈ ಕುರಿತು ಕಂದಾಯ ಸಚಿವ ಆರ್.ಅಶೋಕ ಹಾಗು ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿರುವ ಅವರು,ಕಂದಾಯ ಇಲಾಖೆಯ ಕಚೇರಿಯಲ್ಲಿ ರೈತರು ಇಸಿ ಪಡೆಯಲು ಪರದಾಡುವ ಪರಸ್ಥಿತಿ ನಿರ್ಮಾಣವಾಗಿದೆ.ರೈತರು ಯಾವಾಗ ಬಂದು ಕೇಳಿದರು ಸರ್ವರ್ ಇಲ್ಲ ಎನ್ನುವ ಸಿದ್ಧ ಉತ್ತರ ಸಿಬ್ಬಂದಿಗಳು ನೀಡುತ್ತಾರೆ.
ಇದರಿಂದ ರೈತರು ಬೇಸತ್ತಿದ್ದಾರೆ.ಈಗಾಗಲೆ ಕೊರೊನಾ ಮಹಾಮಾರಿ ಜನರನ್ನು ನಲುಗಿಸಿದೆ ಇಂತಹ ಸಂದರ್ಭದಲ್ಲಿ ಕಂದಾಯ ಇಲಾಖೆಯಲ್ಲಿನ ಕೆಲಸಗಳು ಸರ್ವರ್ ಕಾರಣದಿಂದ ಆಗದಿರುವುದಕ್ಕೆ ರೈತರು ಬ್ಯಾಂಕ್ ಸಾಲವು ದೊರೆಯದೆ ಇತ್ತ ಕೊರೊನಾ ಮಹಾ ಮಾರಿಯ ಭಯದಿಂದ ಕಚೇರಿಗೆ ಬರಲು ಹಿಂದೇಟು ಹಾಕುವಂತಾಗಿದೆ.ಆದ್ದರಿಂದ ಕೂಡಲೆ ಸರಕಾರ ಕಂದಾಯ ಇಲಾಖೆಯಲ್ಲಿನ ತಾಂತ್ರಿಕ ದೋಷವನ್ನು ಸರಿಪಡಿಸಬೇಕೆಂದು ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…