ಜೇವರ್ಗಿ: ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಸಾಧನೆಗಳನ್ನು ಮಾಡುತ್ತಿದ್ದು ಪ್ರತಿಯೊಂದು ಮನೆಯಲ್ಲಿ ಸಹ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆ ಗೊಳ್ಳುವ ಮೂಲಕ ಕಾನೂನುಬದ್ಧವಾಗಿ ಹಕ್ಕುಗಳನ್ನು ಪಡೆದುಕೊಂಡು ಮುಂದೆ ಬರಲು ಸರಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು ಸ್ವಸಹಾಯ ಸಂಘಗಳನ್ನು ಕಟ್ಟಿಕೊಂಡು ಕುಟುಂಬದ ಅಭಿವೃದ್ಧಿಗೆ ಶ್ರಮಿಸುವುದು ಈಗ ಸುಲಭವಾಗಿದೆ ಎಂದು ವಕೀಲರಾದ ಮಲ್ಲಿಕಾರ್ಜುನ ಸೂಗೂರ್ ಹೇಳಿದರು.
ತಾಲೂಕಿನ ಗಂವಾರ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಜೇವರ್ಗಿ ವತಿಯಿಂದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ದಾನಮ್ಮ ಗಂಡ ಗದಿಗೆಪ್ಪ ಸೇರಿದಂತೆ ಉಪಾಧ್ಯಕ್ಷರಾದ ಹಕಿಂ ಪಟೇಲ್ ಹಾಗೂ ಅಂಗನವಾಡಿ ಕಾರ್ಯಕರ್ತರ ತಹರ ಬೇಗಂ, ಈಜೇರಿ ವಲಯ ಮೇಲ್ವಿಚಾರಕರಾದ ಜಯಶ್ರೀ ಪಾಟೀಲ್ ಸೇವಾ ಪ್ರತಿನಿಧಿಯಾದ ಬಸ್ಸಮ್ಮ ಹಾಗೂ 5 ತಂಡದ ಸದಸ್ಯರು ಹಾಜರಿದ್ದರು. ಕಾರ್ಯಕ್ರಮವನ್ನು ತಾಲೂಕು ಸಮನ್ವಯ ಅಧಿಕಾರಿಗಳಾದ ಶಂಕ್ರು ಬಾಯಿ ನಿರೂಪಿಸಿದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…