ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯಾದ್ಯಂತ ಪ್ರವಾಸ ಹಾಕಿಕೊಂಡಿದ್ದೇನೆ. ಹೋದ ಕಡೆಯೆಲ್ಲ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ ಎಂದು ಕಪಪ್ಪಳದ ಜಿಲ್ಲಾ ಕಸಾಪ ಮಾಜಿ ಆಧ್ಯಕ್ಷ ಹಾಗೂ ಪ್ರಸ್ತುತ ರಾಜ್ಯಾಧ್ಯಕ್ಷ ಸ್ಥಾನದ ಸ್ಪರ್ಧೆ ಬಯಸಿರುವ ಶೇಖರಗೌಡ ಮಾಲಿ ಪಾಟೀಲ ತಿಳಿಸಿದರು.
ನಗರದ ಕನ್ನಡ ಭವನದಲ್ಲಿ ಇಂದು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ನನಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು. ಈಗಾಗಲೇ ಬೆಂಗಳೂರು, ಮಡಿಕೇರಿ, ಚಿತ್ರದುರ್ಗ ಜಿಲ್ಲೆಗಳಿಗೆ ಭೇಟಿ ನೀಡಿ ಸಮಾಲೋಚನೆ ನೀಡಿ ಬಂದಿದ್ದೇನೆ ಎಂದು ತಿಳಿಸಿದರು.
ನಾಳೆ ಯಾದಗಿರಿ, ರಾಯಚೂರಿಗೆ ತೆರಳಿ ಅಲ್ಲಿನ ಸಾಹಿತಿ ಕಸಾಪ ಪದಾಧಿಕಾರಿ ಹಾಗೂ ಸದಸ್ಯರನ್ನು ಭೇಟಿ ಮಡುವೆ. ನಂತರ ಬೆಂಗಳೂರು, ಚಿಕ್ಕಮಗಳೂರಿಗೆ ತೆರಳಿ ಚುನಾವಣೆ ಕುರಿತು ಹಾಗೂ ತಮ್ಮನ್ನು ಆಶೀರ್ವದಿಸುವಂತೆ ಕೋರಲಾಗುವುದು ಎಂದು ತಿಳಿಸಿದರು. ತಾವು ಈ ಬಾರಿಯ ಸ್ಪರ್ಧೆಯಲ್ಲಿ ತುರುಸಿನ ಸ್ಪರ್ಧೆ ಒಡ್ಡಲಿದ್ದು, ಎಲ್ಲ ಕಡೆ ಸುತ್ತಾಡಿ ಮತದಾರರಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು.
105 ವರ್ಷಗಳ ಇತಿಹಾಸವಿರುವ ಕನ್ನಡ ಸಾಹಿತ್ಯ ಪರಿಷತ್ ಅನ್ನು ಅಂತಾರಾಷ್ಟ್ರೀಯ ಮಟ್ಟದ ಸಂಸ್ಥೆಯನ್ನಾಗಿ ಬೆಳೆಸಲು, ಕನ್ನಡ ಭಾಷೆ, ಕನ್ನಡ ವಿಶ್ವ ಕನ್ನಟ ಮೊದಲಾದ ಸಮಸ್ತ ಕನ್ನಡಿಗರ ಆಶಯಗಳನ್ನು ನನಾಗಿಸಲು, ಕೇಂದ್ರ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಚುನಾವಣೆಯಲ್ಲಿ ನನಗೆ ನಿಮ್ಮ ಬೆಂಬಲ ಮತ್ತು ಆಶೀರ್ವಾದ ನೀಡಬೇಕು ಎಂದು ಮತದಾರ ಬಾಂಧವರಲ್ಲಿ ಪ್ರಾರ್ಥಿಸಿದರು.
ಜಿಲ್ಲಾ ಕಸಾಪ ಅದ್ಯಕ್ಷ ವೀರಭದ್ರ ಸಿಂಪಿ, ಪ್ರಧಾನ ಕಾರ್ಯದರ್ಶಿ ಮಡಿವಾಳಪ್ಪ ನಾಗರಹಳ್ಳಿ, ಕೋಶಾಧ್ಯಕ್ಷ ದೌಲತರಾಯ ಮಾಲಿ ಪಾಟೀಲ, ಪ. ಮಾನು ಸಗರ, ಕೆ.ಎಸ್. ಬಂಧು, ಸಿ.ಎಸ್. ಮಾಲಿಪಾಟೀಲ, ಡಾ. ಸೂರ್ಯಕಾಂತ ಪಾಟೀಲ ಮತ್ತಿತರರಿದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…