ಹಸನಾಪುರ ವಲಯ ಪೋಷಣ ಅಭಿಯಾನ ಮಾಸಾಚರಣೆ ಭಿತ್ತಿ ಪತ್ರ ಬಿಡುಗಡೆ

ಸುರಪುರ: ತಾಲೂಕು ಆಡಳಿತ, ತಾಲೂಕ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಸುರಪುರ ಇವರ ಸಂಯುಕ್ತಾಶ್ರಯದಲ್ಲಿ ಪೋಷಣೆ ಅಭಿಯಾನ ಮಾಸಚರಣೆ ಸೆಪ್ಟೆಂಬರ್-೨೦೨೦ ಹಸನಾಪುರ ವಲಯ ಮಟ್ಟದ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಸಿ.ಡಿ.ಪಿ.ಓ ಕಛೇರಿ ಆವರಣದಲ್ಲಿ ಬುಧವಾರ ಪೋಷಣ ಅಭಿಯಾನ ಭಿತ್ತಿ ಪತ್ರಗಳನ್ನು ಸಿ.ಡಿ.ಪಿ.ಓ ಲಾಲಸಾಬ ಪೀರಾಪುರ ಬಿಡುಗಡೆ ಮಾಡಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ೫ ವರ್ಷಗಳಲ್ಲಿನ ತೀವೃ ಅಪೌಷ್ಠಿಕ ಮಕ್ಕಳನ್ನು ಗುರುತಿಸುವುದು ಉನ್ನತ ಚಿಕಿತ್ಸೆಗೆ ಎನ್.ಆರ್.ಸಿ ಕೇಂದ್ರಗಳಿಗೆ ಕಳಿಸಿಕೊಡುವ ಮೂಲಕ ಮಕ್ಕಳು ಗಂಭೀರ ಸ್ಥಿತಿಗೆ ತಲುಪುವುದನ್ನು ಕಡಿಮೆಗೊಳಿಸಬಹುದಾಗಿದೆ. ಆದ್ದಾರಿಂದ ತೀವೃ ಅಪೌಷ್ಠಿಕ ಮಕ್ಕಳನ್ನು ಗುರುತಿಸುವುದು, ಶಿಫಾರಸ್ಸು, ಸೇವೆಗಳನ್ನು ನೀಡುವುದು ಜೊತೆಗೆ ಪ್ರತಿ ವರ್ಷದಂತೆ ಸೆಪ್ಟೆಂಬರ್-೨೦೨೦ ತಿಂಗಳನ್ನು ರಾಷ್ಟ್ರೀಯ ಪೋಷಣ ಮಾಸವನ್ನು ಆಚರಿಸಲಾಗುತ್ತಿದ್ದು.

ಈ ವರ್ಷ ಕೊವೀಡ್-೧೯ ಸಂದರ್ಭದಲ್ಲಿ ಡಿಜಿಟಲ್ ವಿಧಾನದ ಮೂಲಕ ಅರಿವು ಮೂಡಿಸುವುದು ಪ್ರಮುಖ ಉದ್ದೇಶ ಎಂದರು. ನಮ್ಮ ಅಂಗನವಾಡಿ ಕಾರ್ಯಕರ್ತೆಯರು ನಿಗದಿತ ವೇಳಾಪಟ್ಟಿಯಂತೆ ಪ್ರತಿ ಅಂಗನವಾಡಿಯಲ್ಲಿ ಕಾರ್ಯಕ್ರಮವನ್ನು ಇತರೆ ಇಲಾಖೆ ಸಂಯೋಗದೊಂದಿಗೆ ಗ್ರಾಮ ಪಂಚಾಯತ ಮಟ್ಟದಲ್ಲಿ ಆಚರಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಜಯಶ್ರೀ ಎಸ್. ಬಿರದಾರ, ತಾಲೂಕ ಸಂಯೋಜಕ ಕರ್ಣ ದೇವಾಪುರ, ಕರುಣಾ ಕುಲಕರ್ಣಿ, ಆರೋಗ್ಯ ಇಲಾಖೆ, ಸವಿತಾ ಶಾಲಾ ಪೂರ್ವ ಶಿಕ್ಷಣ, ಅಂಗನವಾಡಿ ಕಾರ್ತಕರ್ತೆಯರು ಭಾಗವಹಿಸಿದ್ದರು. ಮಾಲಾಶ್ರೀ ಬಿಲ್ಲವ್ ಸ್ವಾಗತಿಸಿದರು, ಮಹಾಲಕ್ಷ್ಮೀ ಪಾಟೀಲ್ ನಿರೂಪಿಸಿದರು,ತಿಪ್ಪಮ್ಮ ಸತ್ಯಂಪೇಟ ವಂದಿಸಿದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

9 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

9 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

9 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

9 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

9 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420