ಸುರಪುರ: ತಾಲೂಕು ಆಡಳಿತ, ತಾಲೂಕ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಸುರಪುರ ಇವರ ಸಂಯುಕ್ತಾಶ್ರಯದಲ್ಲಿ ಪೋಷಣೆ ಅಭಿಯಾನ ಮಾಸಚರಣೆ ಸೆಪ್ಟೆಂಬರ್-೨೦೨೦ ಹಸನಾಪುರ ವಲಯ ಮಟ್ಟದ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಸಿ.ಡಿ.ಪಿ.ಓ ಕಛೇರಿ ಆವರಣದಲ್ಲಿ ಬುಧವಾರ ಪೋಷಣ ಅಭಿಯಾನ ಭಿತ್ತಿ ಪತ್ರಗಳನ್ನು ಸಿ.ಡಿ.ಪಿ.ಓ ಲಾಲಸಾಬ ಪೀರಾಪುರ ಬಿಡುಗಡೆ ಮಾಡಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ೫ ವರ್ಷಗಳಲ್ಲಿನ ತೀವೃ ಅಪೌಷ್ಠಿಕ ಮಕ್ಕಳನ್ನು ಗುರುತಿಸುವುದು ಉನ್ನತ ಚಿಕಿತ್ಸೆಗೆ ಎನ್.ಆರ್.ಸಿ ಕೇಂದ್ರಗಳಿಗೆ ಕಳಿಸಿಕೊಡುವ ಮೂಲಕ ಮಕ್ಕಳು ಗಂಭೀರ ಸ್ಥಿತಿಗೆ ತಲುಪುವುದನ್ನು ಕಡಿಮೆಗೊಳಿಸಬಹುದಾಗಿದೆ. ಆದ್ದಾರಿಂದ ತೀವೃ ಅಪೌಷ್ಠಿಕ ಮಕ್ಕಳನ್ನು ಗುರುತಿಸುವುದು, ಶಿಫಾರಸ್ಸು, ಸೇವೆಗಳನ್ನು ನೀಡುವುದು ಜೊತೆಗೆ ಪ್ರತಿ ವರ್ಷದಂತೆ ಸೆಪ್ಟೆಂಬರ್-೨೦೨೦ ತಿಂಗಳನ್ನು ರಾಷ್ಟ್ರೀಯ ಪೋಷಣ ಮಾಸವನ್ನು ಆಚರಿಸಲಾಗುತ್ತಿದ್ದು.
ಈ ವರ್ಷ ಕೊವೀಡ್-೧೯ ಸಂದರ್ಭದಲ್ಲಿ ಡಿಜಿಟಲ್ ವಿಧಾನದ ಮೂಲಕ ಅರಿವು ಮೂಡಿಸುವುದು ಪ್ರಮುಖ ಉದ್ದೇಶ ಎಂದರು. ನಮ್ಮ ಅಂಗನವಾಡಿ ಕಾರ್ಯಕರ್ತೆಯರು ನಿಗದಿತ ವೇಳಾಪಟ್ಟಿಯಂತೆ ಪ್ರತಿ ಅಂಗನವಾಡಿಯಲ್ಲಿ ಕಾರ್ಯಕ್ರಮವನ್ನು ಇತರೆ ಇಲಾಖೆ ಸಂಯೋಗದೊಂದಿಗೆ ಗ್ರಾಮ ಪಂಚಾಯತ ಮಟ್ಟದಲ್ಲಿ ಆಚರಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಜಯಶ್ರೀ ಎಸ್. ಬಿರದಾರ, ತಾಲೂಕ ಸಂಯೋಜಕ ಕರ್ಣ ದೇವಾಪುರ, ಕರುಣಾ ಕುಲಕರ್ಣಿ, ಆರೋಗ್ಯ ಇಲಾಖೆ, ಸವಿತಾ ಶಾಲಾ ಪೂರ್ವ ಶಿಕ್ಷಣ, ಅಂಗನವಾಡಿ ಕಾರ್ತಕರ್ತೆಯರು ಭಾಗವಹಿಸಿದ್ದರು. ಮಾಲಾಶ್ರೀ ಬಿಲ್ಲವ್ ಸ್ವಾಗತಿಸಿದರು, ಮಹಾಲಕ್ಷ್ಮೀ ಪಾಟೀಲ್ ನಿರೂಪಿಸಿದರು,ತಿಪ್ಪಮ್ಮ ಸತ್ಯಂಪೇಟ ವಂದಿಸಿದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…